Homeಮುಖಪುಟಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದಲ್ಲಿ, ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಶಾ೦ತ್‌ ಕುಮಾರ್‌, “ನಿನ್ನೆ ಲಖಿಂಪುರ್ ಖೇರಿಯಲ್ಲಿ ಮೃತಪಟ್ಟ 4 ರೈತರ ಕುಟುಂಬಗಳಿಗೆ ಸರ್ಕಾರ 45 ಲಕ್ಷ ರೂಪಾಯಿ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುತ್ತದೆ. ಗಾಯಗೊಂಡವರಿಗೆ 10 ಲಕ್ಷ ರೂ. ನೀಡಲಾಗುವುದು. ಜೊತೆಗೆ ರೈತರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗುವುದು. ಅಷ್ಟೇ ಅಲ್ಲದೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

“ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಬಂಧನಗಳನ್ನು ಕೂಡ ಶೀಘ್ರದಲ್ಲಿ ಮಾಡಲಾಗುತ್ತದೆ. ಶವಗಳ ಮರಣೋತ್ತರ ಪರೀಕ್ಷೆ ಕಾನೂನಿನ ಪ್ರಕಾರ ನಡೆಸಲಾಗುತ್ತದೆ. ಅಂತಿಮ ಧಾರ್ಮಿಕ ವಿಧಿಗಳನ್ನು ಅವರ ಧಾರ್ಮಿಕ ನಂಬಿಕೆಗಳ ಪ್ರಕಾರ ನಡೆಸಲಾಗುವುದು” ಎಂದು ಪ್ರಶಾಂತ್‌ ಕುಮಾರ್‌ ಹೇಳಿದ್ದರು.

ಜಿಲ್ಲೆಯಲ್ಲಿ ಸರ್ಕಾರ ಈಗಾಗಲೆ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿದೆ. ಯಾವುದೆ ರಾಜಕೀಯ ಪಕ್ಷಗಳ ನಾಯಕರಿಗೆ ಜಿಲ್ಲೆಯನ್ನು ಪ್ರವೇಶಿಸಲು ಅನುಮತಿ ನೀಡಿಲ್ಲ. ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದೆ. ಜೊತೆಗೆ ಹಲವಾರು ರಾಜಕೀಯ ನಾಯಕರ ಪ್ರವೇಶವನ್ನು ತಡೆದಿದೆ.

ಅದಾಗ್ಯೂ, ರೈತ ಮುಖಂಡ ರಾಕೇಶ್‌ ಟಿಕಾಯತ್ ಅವರಿಗೆ ಪ್ರವೇಶ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಡಿಜಿ,  “ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ರಾಜಕೀಯ ಪಕ್ಷಗಳ ನಾಯಕರು ಜಿಲ್ಲೆಗೆ ಭೇಟಿ ನೀಡಲು ಅನುಮತಿ ನೀಡಿಲ್ಲ. ಆದರೆ, ರೈತ ಸಂಘಗಳ ಸದಸ್ಯರಿಗೆ ಇಲ್ಲಿಗೆ ಬರಲು ಅವಕಾಶವಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...