Homeಮುಖಪುಟಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಾಲ್ವರು ರೈತರನ್ನು ಹತ್ಯೆಗೈದ ಪ್ರಕರಣದಲ್ಲಿ, ಸರ್ಕಾರದ ವಿರುದ್ದ ರೈತರು ನಡೆಸಿದ ಪ್ರತಿಭಟನೆಗೆ ಸರ್ಕಾರ ಮಣಿದಿದೆ. ಮೃತ ರೈತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ. ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾ೦ತ್‌ ಕುಮಾರ್‌ ಅವರು ಸರ್ಕಾರದ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸೂಕ್ತ ಪರಿಹಾರ ನೀಡದೆ ಮೃತಪಟ್ಟ ರೈತರ ಅಂತ್ಯ ಸ೦ಸ್ಕಾರ ಮಾಡುವುದಿಲ್ಲವೆಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಘೋಷಿಸಿದ್ದರು.

ರಾಕೇಶ್‌ ಟಿಕಾಯತ್‌‌ ಅರೊಂದಿಗೆ ಸೇರಿ ನಡೆಸಿದ ಜ೦ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಶಾ೦ತ್‌ ಕುಮಾರ್‌, “ನಿನ್ನೆ ಲಖಿಂಪುರ್ ಖೇರಿಯಲ್ಲಿ ಮೃತಪಟ್ಟ 4 ರೈತರ ಕುಟುಂಬಗಳಿಗೆ ಸರ್ಕಾರ 45 ಲಕ್ಷ ರೂಪಾಯಿ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುತ್ತದೆ. ಗಾಯಗೊಂಡವರಿಗೆ 10 ಲಕ್ಷ ರೂ. ನೀಡಲಾಗುವುದು. ಜೊತೆಗೆ ರೈತರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗುವುದು. ಅಷ್ಟೇ ಅಲ್ಲದೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

“ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಬಂಧನಗಳನ್ನು ಕೂಡ ಶೀಘ್ರದಲ್ಲಿ ಮಾಡಲಾಗುತ್ತದೆ. ಶವಗಳ ಮರಣೋತ್ತರ ಪರೀಕ್ಷೆ ಕಾನೂನಿನ ಪ್ರಕಾರ ನಡೆಸಲಾಗುತ್ತದೆ. ಅಂತಿಮ ಧಾರ್ಮಿಕ ವಿಧಿಗಳನ್ನು ಅವರ ಧಾರ್ಮಿಕ ನಂಬಿಕೆಗಳ ಪ್ರಕಾರ ನಡೆಸಲಾಗುವುದು” ಎಂದು ಪ್ರಶಾಂತ್‌ ಕುಮಾರ್‌ ಹೇಳಿದ್ದರು.

ಜಿಲ್ಲೆಯಲ್ಲಿ ಸರ್ಕಾರ ಈಗಾಗಲೆ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿದೆ. ಯಾವುದೆ ರಾಜಕೀಯ ಪಕ್ಷಗಳ ನಾಯಕರಿಗೆ ಜಿಲ್ಲೆಯನ್ನು ಪ್ರವೇಶಿಸಲು ಅನುಮತಿ ನೀಡಿಲ್ಲ. ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದೆ. ಜೊತೆಗೆ ಹಲವಾರು ರಾಜಕೀಯ ನಾಯಕರ ಪ್ರವೇಶವನ್ನು ತಡೆದಿದೆ.

ಅದಾಗ್ಯೂ, ರೈತ ಮುಖಂಡ ರಾಕೇಶ್‌ ಟಿಕಾಯತ್ ಅವರಿಗೆ ಪ್ರವೇಶ ಸಿಕ್ಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಡಿಜಿ,  “ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ರಾಜಕೀಯ ಪಕ್ಷಗಳ ನಾಯಕರು ಜಿಲ್ಲೆಗೆ ಭೇಟಿ ನೀಡಲು ಅನುಮತಿ ನೀಡಿಲ್ಲ. ಆದರೆ, ರೈತ ಸಂಘಗಳ ಸದಸ್ಯರಿಗೆ ಇಲ್ಲಿಗೆ ಬರಲು ಅವಕಾಶವಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...