Homeಚಳವಳಿಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

’ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ?’

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿದೆ.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡವನ್ನು ತನಿಖೆ ಮಾಡುವಂತೆ ರಾಜ್ಯ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆಗೆ ಘೋಷಿಸಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆ ಅನುಮತಿ ನಿರಾಕರಿಸಿದ್ದರೂ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿದೆ.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದಾರೆ.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು  ಭೇಟಿಯಾಗಿ ಲಖಿಂಪುರ್ ಖೇರಿ ಘಟನೆ ಕುರಿತು ಚರ್ಚಿಸಿದ್ದಾರೆ. ಇಂತಹ ಅನಾಗರಿಕ ಕೃತ್ಯಗಳನ್ನು ಸಹಿಸುವುದಿಲ್ಲ ಎಂದಿರುವ ಚನ್ನಿ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ರೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಿಡುಗಡೆಯಾಗದಿದ್ದರೆ ಲಖಿಂಪುರ್ ಖೇರಿಗೆ ಪಾದಯಾತ್ರೆ: ಸಿಧು ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...