Homeಚಳವಳಿಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

’ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ?’

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗವು ಲಖಿಂಪುರ್ ಖೇರಿಗೆ ಭೇಟಿ ನೀಡಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಭಾನುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ನಾಲ್ವರು ರೈತರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ನಿಯೋಗ ಹೊರಟಿದೆ.

ಲಖಿಂಪುರ್ ಖೇರಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಹಾಕಲಾಗಿದೆ. ಇದರ ಅಡಿಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಲಖಿಂಪುರ್ ಖೇರಿಯ ಜಿಲ್ಲಾ ಕೇಂದ್ರದಿಂದ 70 ಕಿಮೀ ದೂರದಲ್ಲಿರುವ ಟಿಕುನಿಯಾಕ್ಕೆ ಪ್ರತಿಪಕ್ಷ ನಾಯಕರು ಹೋಗುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರವು ಬಿಗಿ ಬಂದೋಬಸ್ತ್ ಮತ್ತು ಪೊಲೀಸರನ್ನು ನಿಯೋಜಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡವನ್ನು ತನಿಖೆ ಮಾಡುವಂತೆ ರಾಜ್ಯ ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆಗೆ ಘೋಷಿಸಿದೆ.

ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ಬುಧವಾರ ಬೆಳಿಗ್ಗೆ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ದ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿದ್ದ ಹಿನ್ನೆಲೆ ಅನುಮತಿ ನಿರಾಕರಿಸಿದ್ದರೂ ಮೃತ ರೈತರ ಕುಟುಂಬಗಳನ್ನು ಭೇಟಿಯಾಗಲು ಲಖಿಂಪುರ್‌ ಖೇರಿಗೆ ಕಾಂಗ್ರೆಸ್ ನಿಯೋಗ ಹೊರಟಿದೆ.

“ಸೆಕ್ಷನ್ 144 ಜಾರಿಯಿದ್ದರೂ ಮೂರು ಜನರ ತಂಡ ಹೋಗಬಹುದು. ಸೆಕ್ಷನ್ 144 ನಲ್ಲಿ 5 ಜನರ ತಂಡ ಹೋಗಬಾರದು. ಇದರಿಂದಾಗಿ ನಾವು ಪತ್ರ ಬರೆದಿದ್ದೇವೆ. ಬೇರೆ ಪಕ್ಷದವರಿಗೆ ಅನುಮತಿ ನಿಡಲಾಗುತ್ತಿದೆ. ನಮ್ಮನ್ನು ಮಾತ್ರ ತಡೆಯಲಾಗುತ್ತಿದೆ. ನಾವೇನು ತಪ್ಪು ಮಾಡಿದ್ದೇವೆ..?” ಎಂದು ಪ್ರಶ್ನಿಸಿದ್ದಾರೆ.

“ನಾವು ವಿರೋಧ ಪಕ್ಷದವರು. ನಾವು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಹತ್ರಾಸ್‌ನಲ್ಲಿ ನಾವು ಒತ್ತಡ ಹಾಕಿದ ಕಾರಣಕ್ಕೆ ಅಲ್ಲಿ ತನಿಖೆ ಆರಂಭವಾಯಿತು. ಇದರಿಂದಾಗಿ ರೈತರ ವಿಷಯದಲ್ಲಿಯೂ ನಾವು ಒತ್ತಡ ಹಾಕುತ್ತಿದ್ದೇವೆ. ರೈತರನ್ನು ಕೊಲೆ ಮಾಡಲಾಗಿದೆ, ಅವರಿಗೆ ಅನ್ಯಾಯವಾಗಿದೆ. ನಿಜ ಹೇಳಬೇಕೆಂದರೆ ಇದು ನಿಮ್ಮ (ಮಾಧ್ಯಮ) ಕೆಲಸ. ನೀವು ನಿಮ್ಮ ಜವಾಬ್ದಾರಿ ಮರೆತು ಕುಳಿತಿದ್ದಿರಿ ಅದಕ್ಕೆ ನಾವು ಮಾಡುತ್ತಿದ್ದೆವೆ” ಎಂದು ಮಾಧ್ಯಮದವರ ವಿರುದ್ದ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೀತಾಪುರದಲ್ಲಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ. ಪ್ರಿಯಾಂಕಾ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಕ್ಷದ ನಾಯಕ ದೀಪೇಂದ್ರ ಹೂಡಾ ಮತ್ತು ಇತರರ ವಿರುದ್ಧ  (ಸಿಆರ್‌ಪಿಸಿ) ಸೆಕ್ಷನ್ 151, 107, 116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು  ಭೇಟಿಯಾಗಿ ಲಖಿಂಪುರ್ ಖೇರಿ ಘಟನೆ ಕುರಿತು ಚರ್ಚಿಸಿದ್ದಾರೆ. ಇಂತಹ ಅನಾಗರಿಕ ಕೃತ್ಯಗಳನ್ನು ಸಹಿಸುವುದಿಲ್ಲ ಎಂದಿರುವ ಚನ್ನಿ, ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ರೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಬಿಡುಗಡೆಯಾಗದಿದ್ದರೆ ಲಖಿಂಪುರ್ ಖೇರಿಗೆ ಪಾದಯಾತ್ರೆ: ಸಿಧು ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...