Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡುವವರೆಗೂ ಅವರ ಶವ ಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು. ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಯುಪಿ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಮೃತ ಲವ್‌ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರದ ಪಕ್ಕ ಕುಳಿತು ರೋಧಿಸುತ್ತಿರುವ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು, ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಶ್ ಮಿಶ್ರಾ ವಿರುದ್ಧದ ಎಫ್‌ಐಆರ್ ಪ್ರತಿಯನ್ನು ನೀಡುವವರೆಗೂ ಅವರ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದೆ.

“ನನ್ನ ಮಗ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣನಾದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಸರ್ಕಾರವು ಇದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ” ಎಂದು ಲವ್‌ಪ್ರೀತ್ ತಂದೆ ಸತ್ನಾಮ್ ಸಿಂಗ್ ಆರೋಪಿಸಿದ್ದಾರೆ.

ಒಂದು ಒಳ್ಳೆಯ ಉದ್ದೇಶಕ್ಕಾಗಿ ನಾನು ಹೊರ ಹೊಗುತ್ತಿದ್ದೇನೆ ಎಂದು ಮನೆಯಿಂದ ಹೊರಟ್ಟಿದ್ದ, ಮನೆಯ ಒಬ್ಬನೆ ಮಗನನ್ನು ಕಳೆದು ಕೊಂಡಿರುವ ಪೋಷಕರು ಮತ್ತು ಲವ್‌ಪ್ರೀತ್‌ನ ಇಬ್ಬರು ಸಹೋದರಿಯರು ತಮ್ಮ ಏಕೈಕ ಸಹೋದರನನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಲವ್‌ಪ್ರೀತ್‌ ಅವರ ಮೃತ ದೇಹವನ್ನು ಭಾನುವಾರದಿಂದ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದೆ.

ಮೃತ ಎಂಟು ರೈತರು ಗಂಭೀರ ಗಾಯಗಳು, ಆಘಾತ ಮತ್ತು ಮೆದುಳಿನ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎನ್ನಲಾಗಿದೆ. ಆದರೆ, ಘಟನೆಯ ಬಳಿಕ ಹೊರ ಬಮದಿರುವ ವಿಡಿಯೊಗಳನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಗಳು ಆಗ್ರಹಿಸಿವೆ.

ಘಟನೆಗೆ ಸಂಬಂಧಿಸಿದೆ ಎನ್ನಲಾಗುತ್ತಿರುವ ಎರಡು ವಿಡಿಯೊಗಳು ಎಲ್ಲೆಡೆ ವೈರಲ್ ಆಗುತ್ತಿವೆ. ೊಂದು ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ.


ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...