Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡುವವರೆಗೂ ಅವರ ಶವ ಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು. ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಯುಪಿ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಮೃತ ಲವ್‌ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರದ ಪಕ್ಕ ಕುಳಿತು ರೋಧಿಸುತ್ತಿರುವ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು, ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಶ್ ಮಿಶ್ರಾ ವಿರುದ್ಧದ ಎಫ್‌ಐಆರ್ ಪ್ರತಿಯನ್ನು ನೀಡುವವರೆಗೂ ಅವರ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದೆ.

“ನನ್ನ ಮಗ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣನಾದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಸರ್ಕಾರವು ಇದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ” ಎಂದು ಲವ್‌ಪ್ರೀತ್ ತಂದೆ ಸತ್ನಾಮ್ ಸಿಂಗ್ ಆರೋಪಿಸಿದ್ದಾರೆ.

ಒಂದು ಒಳ್ಳೆಯ ಉದ್ದೇಶಕ್ಕಾಗಿ ನಾನು ಹೊರ ಹೊಗುತ್ತಿದ್ದೇನೆ ಎಂದು ಮನೆಯಿಂದ ಹೊರಟ್ಟಿದ್ದ, ಮನೆಯ ಒಬ್ಬನೆ ಮಗನನ್ನು ಕಳೆದು ಕೊಂಡಿರುವ ಪೋಷಕರು ಮತ್ತು ಲವ್‌ಪ್ರೀತ್‌ನ ಇಬ್ಬರು ಸಹೋದರಿಯರು ತಮ್ಮ ಏಕೈಕ ಸಹೋದರನನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಲವ್‌ಪ್ರೀತ್‌ ಅವರ ಮೃತ ದೇಹವನ್ನು ಭಾನುವಾರದಿಂದ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದೆ.

ಮೃತ ಎಂಟು ರೈತರು ಗಂಭೀರ ಗಾಯಗಳು, ಆಘಾತ ಮತ್ತು ಮೆದುಳಿನ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎನ್ನಲಾಗಿದೆ. ಆದರೆ, ಘಟನೆಯ ಬಳಿಕ ಹೊರ ಬಮದಿರುವ ವಿಡಿಯೊಗಳನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಗಳು ಆಗ್ರಹಿಸಿವೆ.

ಘಟನೆಗೆ ಸಂಬಂಧಿಸಿದೆ ಎನ್ನಲಾಗುತ್ತಿರುವ ಎರಡು ವಿಡಿಯೊಗಳು ಎಲ್ಲೆಡೆ ವೈರಲ್ ಆಗುತ್ತಿವೆ. ೊಂದು ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ.


ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...