Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡುವವರೆಗೂ ಅವರ ಶವ ಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು. ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಯುಪಿ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಮೃತ ಲವ್‌ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರದ ಪಕ್ಕ ಕುಳಿತು ರೋಧಿಸುತ್ತಿರುವ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು, ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಶ್ ಮಿಶ್ರಾ ವಿರುದ್ಧದ ಎಫ್‌ಐಆರ್ ಪ್ರತಿಯನ್ನು ನೀಡುವವರೆಗೂ ಅವರ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದೆ.

“ನನ್ನ ಮಗ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣನಾದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಸರ್ಕಾರವು ಇದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ” ಎಂದು ಲವ್‌ಪ್ರೀತ್ ತಂದೆ ಸತ್ನಾಮ್ ಸಿಂಗ್ ಆರೋಪಿಸಿದ್ದಾರೆ.

ಒಂದು ಒಳ್ಳೆಯ ಉದ್ದೇಶಕ್ಕಾಗಿ ನಾನು ಹೊರ ಹೊಗುತ್ತಿದ್ದೇನೆ ಎಂದು ಮನೆಯಿಂದ ಹೊರಟ್ಟಿದ್ದ, ಮನೆಯ ಒಬ್ಬನೆ ಮಗನನ್ನು ಕಳೆದು ಕೊಂಡಿರುವ ಪೋಷಕರು ಮತ್ತು ಲವ್‌ಪ್ರೀತ್‌ನ ಇಬ್ಬರು ಸಹೋದರಿಯರು ತಮ್ಮ ಏಕೈಕ ಸಹೋದರನನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಲವ್‌ಪ್ರೀತ್‌ ಅವರ ಮೃತ ದೇಹವನ್ನು ಭಾನುವಾರದಿಂದ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದೆ.

ಮೃತ ಎಂಟು ರೈತರು ಗಂಭೀರ ಗಾಯಗಳು, ಆಘಾತ ಮತ್ತು ಮೆದುಳಿನ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎನ್ನಲಾಗಿದೆ. ಆದರೆ, ಘಟನೆಯ ಬಳಿಕ ಹೊರ ಬಮದಿರುವ ವಿಡಿಯೊಗಳನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಗಳು ಆಗ್ರಹಿಸಿವೆ.

ಘಟನೆಗೆ ಸಂಬಂಧಿಸಿದೆ ಎನ್ನಲಾಗುತ್ತಿರುವ ಎರಡು ವಿಡಿಯೊಗಳು ಎಲ್ಲೆಡೆ ವೈರಲ್ ಆಗುತ್ತಿವೆ. ೊಂದು ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ.


ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...