Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡುವವರೆಗೂ ಅವರ ಶವ ಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ವಿರೋಧಿಸಿ ಭಾನುವಾರ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ, ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದವರಲ್ಲಿ 19 ವರ್ಷದ ಯುವ ರೈತ ಲವ್‌ಪ್ರೀತ್ ಸಿಂಗ್‌ ಕೂಡ ಸೇರಿದ್ದಾರೆ. ವೇಗವಾಗಿ ನುಗ್ಗಿದ ಕಾರಿಗೆ ಸಿಲುಕಿ, ಗಂಭೀರವಾಗಿ ಗಾಯಗೊಂಡಿದ್ದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಈ ವೇಳೆ ಆಸ್ಪತ್ರೆಗೆ ಬರುವಂತೆ ತಮ್ಮ ತಂದೆಗೆ ಕರೆ ಮಾಡಿ ತಿಳಿಸಿದ್ದರು. ಆದರೆ, ಮನೆಯವರು ಲಖಿಂಪುರ್‌ ಆಸ್ಪತ್ರೆಗೆ ತೆರುವ ವೇಳೆಗೆ ಲವ್‌ಪ್ರೀತ್ ಸಿಂಗ್ ಸಾವನ್ನಪ್ಪಿದ್ದರು. ಸಚಿವರ ಪುತ್ರ ಆಶಿಶ್ ಮಿಶ್ರಾ ಕಾರು ಚಲಾಯಿಸುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ಯುಪಿ ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಮೃತ ಲವ್‌ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರದ ಪಕ್ಕ ಕುಳಿತು ರೋಧಿಸುತ್ತಿರುವ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು, ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಶ್ ಮಿಶ್ರಾ ವಿರುದ್ಧದ ಎಫ್‌ಐಆರ್ ಪ್ರತಿಯನ್ನು ನೀಡುವವರೆಗೂ ಅವರ ಅಂತ್ಯಕ್ರಿಯೆ ಮಾಡಲು ನಿರಾಕರಿಸಿದೆ.

“ನನ್ನ ಮಗ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಾರಣನಾದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆಡಳಿತ ಸರ್ಕಾರವು ಇದನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ” ಎಂದು ಲವ್‌ಪ್ರೀತ್ ತಂದೆ ಸತ್ನಾಮ್ ಸಿಂಗ್ ಆರೋಪಿಸಿದ್ದಾರೆ.

ಒಂದು ಒಳ್ಳೆಯ ಉದ್ದೇಶಕ್ಕಾಗಿ ನಾನು ಹೊರ ಹೊಗುತ್ತಿದ್ದೇನೆ ಎಂದು ಮನೆಯಿಂದ ಹೊರಟ್ಟಿದ್ದ, ಮನೆಯ ಒಬ್ಬನೆ ಮಗನನ್ನು ಕಳೆದು ಕೊಂಡಿರುವ ಪೋಷಕರು ಮತ್ತು ಲವ್‌ಪ್ರೀತ್‌ನ ಇಬ್ಬರು ಸಹೋದರಿಯರು ತಮ್ಮ ಏಕೈಕ ಸಹೋದರನನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಲವ್‌ಪ್ರೀತ್‌ ಅವರ ಮೃತ ದೇಹವನ್ನು ಭಾನುವಾರದಿಂದ ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದೆ.

ಮೃತ ಎಂಟು ರೈತರು ಗಂಭೀರ ಗಾಯಗಳು, ಆಘಾತ ಮತ್ತು ಮೆದುಳಿನ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ ಎನ್ನಲಾಗಿದೆ. ಆದರೆ, ಘಟನೆಯ ಬಳಿಕ ಹೊರ ಬಮದಿರುವ ವಿಡಿಯೊಗಳನ್ನು ಆಧರಿಸಿ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಗಳು ಆಗ್ರಹಿಸಿವೆ.

ಘಟನೆಗೆ ಸಂಬಂಧಿಸಿದೆ ಎನ್ನಲಾಗುತ್ತಿರುವ ಎರಡು ವಿಡಿಯೊಗಳು ಎಲ್ಲೆಡೆ ವೈರಲ್ ಆಗುತ್ತಿವೆ. ೊಂದು ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ.


ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...