ಭಾನುವಾರ ಲಖಿಂಪುರ್ ಖೇರಿಯಲ್ಲಿ ರೈತರ ಮೇಲಿನ ಹತ್ಯಾಕಾಂಡದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಸಚಿವ ಪಟ್ಟಿ ಮಾಡಿದ್ದವರಲ್ಲಿ ಒಬ್ಬ ಪತ್ರಕರ್ತ ಎಂದು ಮೃತನ ಕುಟುಂಬ ಸ್ಪಷ್ಟಪಡಿಸಿದೆ. ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಪ್ರತಿಭಟನೆಯನ್ನು ವರದಿ ಮಾಡಲು ಮುಂಜಾನೆಯೇ ಮನೆಯಿಂದ ಹೊರಟಿದ್ದ ರಮಣ್ ಕಶ್ಯಪ್ ನಾಪತ್ತೆಯಾಗಿದ್ದರು. ರಾತ್ರಿ 10 ರ ಸುಮಾರಿಗೆ ಲಖಿಂಪುರ್ ಖೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಿಂದ ಅವರು ಮೃತಪಟ್ಟಿರುವ ಸುದ್ದಿ ಮನೆಯವರಿಗೆ ತಲುಪಿತ್ತು.
ಭಾನುವಾರದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರನ್ನು ಪಟ್ಟಿ ಮಾಡುವಾಗ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ, ತಮ್ಮ ನಾಲ್ವರು ಬಿಜೆಪಿ ಕಾರ್ಯಕರ್ತರ ಸಂಖ್ಯೆಯಲ್ಲಿ ರಮಣ್ ಕಶ್ಯಪ್ (32) ಅವರನ್ನು ಸೇರಿಸಿಕೊಂಡಿದ್ದರು.
ಆದರೆ, ಮೃತ ರಮಣ್ ಕಶ್ಯಪ್ ಅವರ ಕುಟುಂಬವು, “ಕಶ್ಯಪ್ ವರದಿಗಾರರಾಗಿ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿರಲಿಲ್ಲ. ನನ್ನ ಮಗ ಪತ್ರಕರ್ತರಾಗಿದ್ದರು. ಮಿಶ್ರಾ ಅವರ ಮಗ ಆಶೀಶ್ ಮತ್ತು ಅವರ ಸಹಾಯಕರನ್ನು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ
ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್ ಮೋರ್ಚಾ