Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿ ಮಾಡಿದ್ದ ಸಚಿವ!

ಲಖಿಂಪುರ್‌ ಖೇರಿ ಹತ್ಯಾಕಾಂಡ: ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿ ಮಾಡಿದ್ದ ಸಚಿವ!

- Advertisement -
- Advertisement -

ಭಾನುವಾರ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲಿನ ಹತ್ಯಾಕಾಂಡದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಸಚಿವ ಪಟ್ಟಿ ಮಾಡಿದ್ದವರಲ್ಲಿ ಒಬ್ಬ ಪತ್ರಕರ್ತ ಎಂದು ಮೃತನ ಕುಟುಂಬ ಸ್ಪಷ್ಟಪಡಿಸಿದೆ. ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಪ್ರತಿಭಟನೆಯನ್ನು ವರದಿ ಮಾಡಲು ಮುಂಜಾನೆಯೇ ಮನೆಯಿಂದ ಹೊರಟಿದ್ದ ರಮಣ್ ಕಶ್ಯಪ್ ನಾಪತ್ತೆಯಾಗಿದ್ದರು. ರಾತ್ರಿ 10 ರ ಸುಮಾರಿಗೆ ಲಖಿಂಪುರ್ ಖೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಿಂದ ಅವರು ಮೃತಪಟ್ಟಿರುವ ಸುದ್ದಿ ಮನೆಯವರಿಗೆ ತಲುಪಿತ್ತು.

ಭಾನುವಾರದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರನ್ನು ಪಟ್ಟಿ ಮಾಡುವಾಗ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ, ತಮ್ಮ ನಾಲ್ವರು ಬಿಜೆಪಿ ಕಾರ್ಯಕರ್ತರ ಸಂಖ್ಯೆಯಲ್ಲಿ ರಮಣ್ ಕಶ್ಯಪ್ (32) ಅವರನ್ನು ಸೇರಿಸಿಕೊಂಡಿದ್ದರು.

ಆದರೆ, ಮೃತ ರಮಣ್ ಕಶ್ಯಪ್ ಅವರ ಕುಟುಂಬವು, “ಕಶ್ಯಪ್ ವರದಿಗಾರರಾಗಿ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿರಲಿಲ್ಲ. ನನ್ನ ಮಗ ಪತ್ರಕರ್ತರಾಗಿದ್ದರು. ಮಿಶ್ರಾ ಅವರ ಮಗ ಆಶೀಶ್ ಮತ್ತು ಅವರ ಸಹಾಯಕರನ್ನು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ಈ ಕುರಿತು ಮೃತ ಪತ್ರಕರ್ತರ ಕುಟುಂಬ ಪ್ರತ್ಯಕ ದೂರು ಸಲ್ಲಿಸಿದೆ. ಸೋಮವಾರ ದಾಖಲಾದ ಎರಡು ಎಫ್‌ಐಆರ್‌ಗಳ ಹೊರತಾಗಿ ‍ಮತ್ತೊಂದು ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ ಎಂದು ಎಸ್‌ಡಿಎಂ ಓಂ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

 

“ನನ್ನ ಮಗ ನಿಘಾಸನ್‌ನಲ್ಲಿ ಸಾಧನಾ ನ್ಯೂಸ್ ಚಾನೆಲ್‌ನಲ್ಲಿ ವರದಿಗಾರನಾಗಿದ್ದ. ಅಕ್ಟೋಬರ್ 3 ರಂದು,  ಮಹಾರಾಜ ಅಗ್ರಸೇನ್ ಕ್ರೀಡಾ ಮೈದಾನದಲ್ಲಿ ರೈತರ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದರು. ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಅಲ್ಲಿಗೆ ಬರಬೇಕಿತ್ತು. ಸಂಸದನ ಮಗ ಆಶಿಶ್ ಮಿಶ್ರಾ ಮತ್ತು ಪಕ್ಷದ ಕಾರ್ಯಕರ್ತರು ನನ್ನ ಮಗನನ್ನು ಕೊಂದಿದ್ದಾರೆ” ಎಂದು ರಮಣ್ ಕಶ್ಯಪ್ ತಂದೆ ರಾಮ್ ಅಸ್ರೆ ಕಶ್ಯಪ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
“ಘಟನಾ ಸ್ಥಳದಲ್ಲಿದ್ದವರು ನನ್ನ ಮಗ ಸಂಯುಕ್ತ್ ಕಿಸಾನ್ ಮೋರ್ಚಾ ನಾಯಕ ತೆಜಿಂದರ್ ಸಿಂಗ್ ವಿರ್ಕ್ ಅವರೊಂದಿಗೆ ವಿಡಿಯೊ ಸಂದರ್ಶನ ನಡೆಸುತ್ತಿದ್ದರು. ರೈತರ ಮೇಲೆ ಬೆಂಗಾವಲು ವಾಹನಗಳು ಹರಿದು ಬರುತ್ತಿರುವ ವಿಡಿಯೋ ಚಿತ್ರಿಕರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದಕ್ಕಾಗಿಯೇ ನನ್ನ ಮಗನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ” ಎಂದು ಕಶ್ಯಪ್ ತಂದೆ ದೂರಿನಲ್ಲಿ ಹೇಳಿದ್ದಾರೆ.
“ರಮಣ್ ಕಶ್ಯಪ್ ಭುಜದ ಮೇಲೆ ಮೂಗೇಟುಗಳು, ತಲೆಗೆ ಭಾರೀ ಗಾಯಗಳು ಮತ್ತು ಅವನ ಎದೆ ಮತ್ತು ಬಲಗೈ ಮೇಲೆ ಗುಂಡಿನ ರಂಧ್ರಗಳಿದ್ದವು” ಎಂದು ಸಹೋದರ ಪವನ್ ಹೇಳಿದ್ದಾರೆ. SDM ಓಂ ಪ್ರಕಾಶ್ ಗುಪ್ತಾ ಕುಟುಂಬವನ್ನು ಭೇಟಿ ಮಾಡಿ ಅವರರ ದೂರ ಸ್ವೀಕರಿಸಲು ಒಪ್ಪಿಕೊಂಡ ಬಳಿಕ ರಮಣ್ ಕಶ್ಯಪ್ ಅವರ ಅಂತ್ಯ ಸಂಸ್ಕಾರ ಮಾಡಲಾಗಿದೆ.
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...