Homeಚಳವಳಿಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಉಲ್ಲೇಖಿಸಿ ’ಉತ್ತರ ಪ್ರದೇಶದಲ್ಲಿ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ವಿರುದ್ಧ ಹೋರಾಡಲು ಜಂಟಿ ವಿರೋಧದ ಅವಶ್ಯಕತೆ ಇದೆ’ ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಮಂಗಳವಾರ ಹೇಳಿದ್ದಾರೆ.

ಭಾನುವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಮತ್ತು ಸ್ಥಳೀಯ ಪತ್ರಕರ್ತರು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿರುವುದು ದೇಶವನ್ನೇ ಬೆಚ್ಚಿಬೀಳಿಸಿದೆ ಎಂದು ಸಂಸದ ಸಂಜಯ್ ರಾವತ್ ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ ಮತ್ತು ರೈತರನ್ನು ಭೇಟಿ ಮಾಡಲು ಹೋಗುತ್ತಿರುವ ರಾಜಕೀಯ ನಾಯಕರ ಪ್ರವೇಶವನ್ನು ನಿರ್ಬಂಧಿಸಿರುವುದನ್ನು ಉಲ್ಲೇಖಿಸಿರುವ ಸಂಜಯ್ ರಾವತ್, ಯುಪಿಯಲ್ಲಿ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆಯ ವಿರುದ್ಧ ಜಂಟಿ ವಿರೋಧದ ಅವಶ್ಯಕತೆ ಇರುವುದರಿಂದ ರಾಹುಲ್ ಗಾಂಧಿಯವರನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿ ಮಾಡಿದ್ದ ಸಚಿವ!

ಈ ಕುರಿತು ಟ್ವೀಟ್ ಮಾಡಿರುವ ಸಂಸದ ಸಂಜಯ್ ರಾವತ್, “ಲಖಿಂಪುರ್ ಖೇರಿ ಹಿಂಸೆ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಬಂಧಿಸಲಾಗಿದೆ. ವಿರೋಧ ಪಕ್ಷದ ನಾಯಕರು ರೈತರನ್ನು ಭೇಟಿ ಮಾಡುವುದನ್ನು ನಿರ್ಬಂಧಿಸಲಾಗಿದೆ. ಯುಪಿಯಲ್ಲಿ ಸರ್ಕಾರದ ದಬ್ಬಾಳಿಕೆಯ ವಿರುದ್ಧ ಜಂಟಿ ವಿರೋಧದ ಕ್ರಮದ ಅಗತ್ಯವಿದೆ. ಇಂದು ಸಂಜೆ 4.15 ಕ್ಕೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ. ಜೈಹಿಂದ್!” ಎಂದಿದ್ದಾರೆ.

ಶಿವಸೇನಾ ಮುಖವಾಣಿ ಸಾಮಾನಾದಲ್ಲಿ ಲಖಿಂಪುರ್ ಖೇರಿಯಲ್ಲಿನ ಹತ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ.

“ಬಡವರ ಸಮಸ್ಯೆಗಳ ಬಗ್ಗೆ ಪ್ರಧಾನಮಂತ್ರಿಯವರು ಭಾವನಾತ್ಮಕವಾಗಿರುವುದನ್ನು ಕಂಡ ಅನೇಕ ಸಂದರ್ಭಗಳಿವೆ. ಆದರೆ, ಸಾವಿಗೆ ಸಿಲುಕಿರುವ ರೈತರ ಕುಟುಂಬಗಳಿಗೆ ಸಂವೇದನಾಶೀಲವಾಗಿರುವ ಮೋದಿ ಸಂತಾಪ ವ್ಯಕ್ತಪಡಿಸದಿರುವುದು ಆಶ್ಚರ್ಯಕರವಾಗಿದೆ” ಎಂದು ಬರೆದಿದ್ದಾರೆ.

ಭಾರತದ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ಕೇಂದ್ರ ಸರ್ಕಾರದ ಒಂದು ವರ್ಷದ ಅಭಿಯಾನದ ಭಾಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರ ಪ್ರದೇಶದ ರಾಜಧಾನಿ ಲಕ್ನೋಗೆ ಭೇಟಿ ನೀಡಿದ್ದಾರೆ.

ಭಾನುವಾರ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ರೈತರು ಮತ್ತು ಸ್ಥಳೀಯ ಪತ್ರಕರ್ತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದಾರೆ. ಇದಕ್ಕೆ ದೇಶದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಉತ್ತರ ಪ್ರದೇಶ ನೋವಿನಲ್ಲಿರುವ ಈ ಸಮಯದಲ್ಲಿ ಪ್ರಧಾನಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿರುವುದು ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...