Homeಮುಖಪುಟಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ...

ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

- Advertisement -
- Advertisement -

2021ರ ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರದ ಮಾಜಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮಿಶ್ರಾ ಅವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು ಆರೋಪಗಳನ್ನು ನಿರಾಕರಿಸಿದ ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದ್ದಾರೆ.

ಆರಂಭದಲ್ಲಿ, ಪ್ರಕರಣದ ದೂರುದಾರರೊಬ್ಬರ ಪರವಾಗಿ ಹಾಜರಾದ ವಕೀಲರು ನ್ಯಾಯಾಲಯಕ್ಕೆ ಈ ಬಗ್ಗೆ ತಿಳಿಸಿದ್ದು, ಮಿಶ್ರಾ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ. ಮಿಶ್ರ ಪರ ವಕೀಲ ದವೆ ಈ ಆರೋಪಗಳನ್ನು ನಿರಾಕರಿಸಿದ್ದು, ಇದು “ಅಂತ್ಯವಿಲ್ಲದ ಪ್ರಕ್ರಿಯೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ನಾಲ್ಕು ವಾರಗಳಲ್ಲಿ ಆರೋಪಗಳನ್ನು ನಿರಾಕರಿಸಿ ಅಫಿಡವಿಟ್ ಸಲ್ಲಿಸುವಂತೆ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಹೇಳಿತು. ಜುಲೈ 22 ರಂದು, ನ್ಯಾಯಾಲಯವು ಆಶಿಶ್ ಮಿಶ್ರಾಗೆ ಜಾಮೀನು ನೀಡಿದ್ದು, ದೆಹಲಿ ಅಥವಾ ಲಕ್ನೋಗೆ ಅವರು ಸಂಚಾರ ಮಾಡದಂತೆ ನಿರ್ಬಂಧಿಸಿದೆ. ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿತ್ತು. ಲಖಿಂಪುರ ಖೇರಿ ಹಿಂಸಾಚಾರದ

ಕಳೆದ ವರ್ಷ ಜನವರಿ 25 ರಂದು, ಘೋರ ಘಟನೆಯ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ನಾಲ್ವರು ರೈತರಾದ ಗುರುವಿಂದರ್ ಸಿಂಗ್, ಕಮಲ್ಜೀತ್ ಸಿಂಗ್, ಗುರುಪ್ರೀತ್ ಸಿಂಗ್ ಮತ್ತು ವಿಚಿತ್ರಾ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಅಕ್ಟೋಬರ್ 3, 2021 ರಂದು ಸಂಭವಿಸಿದ ಈ ದುರ್ಘಟನೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಕೊಲ್ಲಲ್ಪಟ್ಟರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಹಿಂಸಾಚಾರ ಭುಗಿಲೆದ್ದಿತ್ತು.

ಸ್ಪೋರ್ಟ್ಸ್ ಯುಟಿಲಿಟಿ ವಾಹನದಿಂದ ನಾಲ್ವರು ರೈತರನ್ನು ಅಡಿಗೆ ಹಾಕಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ಉದ್ರಿಕ್ತಗೊಂಡ ರೈತರ ಗುಂಪು ಒಬ್ಬ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತನೂ ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಜನವರಿ 25 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಆಶಿಶ್ ಮಿಶ್ರಾ ಉತ್ತರ ಪ್ರದೇಶ ಅಥವಾ ದೆಹಲಿಯಲ್ಲಿ ಉಳಿಯಬಾರದು ಎಂದು ಹೇಳಿತ್ತು. ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಮಾಡಲಾಗಿತ್ತು. ನಂತರ, ಸೆಪ್ಟೆಂಬರ್ 26 ರಂದು, ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಅವರ ಮಗಳ ಚಿಕಿತ್ಸೆಗಾಗಿ ದೆಹಲಿಗೆ ಭೇಟಿ ನೀಡಲು ಮತ್ತು ಉಳಿಯಲು ಅನುವು ಮಾಡಿಕೊಡಲು ಅವರ ನೀಡಿದ್ದ ಜಾಮೀನಿನ ಷರತ್ತುಗಳನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿತ್ತು.

ಇದನ್ನೂ ಓದಿ: ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...