Homeಮುಖಪುಟಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ...

ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

- Advertisement -
- Advertisement -

2021ರ ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರದ ಮಾಜಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮಿಶ್ರಾ ಅವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು ಆರೋಪಗಳನ್ನು ನಿರಾಕರಿಸಿದ ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದ್ದಾರೆ.

ಆರಂಭದಲ್ಲಿ, ಪ್ರಕರಣದ ದೂರುದಾರರೊಬ್ಬರ ಪರವಾಗಿ ಹಾಜರಾದ ವಕೀಲರು ನ್ಯಾಯಾಲಯಕ್ಕೆ ಈ ಬಗ್ಗೆ ತಿಳಿಸಿದ್ದು, ಮಿಶ್ರಾ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ. ಮಿಶ್ರ ಪರ ವಕೀಲ ದವೆ ಈ ಆರೋಪಗಳನ್ನು ನಿರಾಕರಿಸಿದ್ದು, ಇದು “ಅಂತ್ಯವಿಲ್ಲದ ಪ್ರಕ್ರಿಯೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ನಾಲ್ಕು ವಾರಗಳಲ್ಲಿ ಆರೋಪಗಳನ್ನು ನಿರಾಕರಿಸಿ ಅಫಿಡವಿಟ್ ಸಲ್ಲಿಸುವಂತೆ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಹೇಳಿತು. ಜುಲೈ 22 ರಂದು, ನ್ಯಾಯಾಲಯವು ಆಶಿಶ್ ಮಿಶ್ರಾಗೆ ಜಾಮೀನು ನೀಡಿದ್ದು, ದೆಹಲಿ ಅಥವಾ ಲಕ್ನೋಗೆ ಅವರು ಸಂಚಾರ ಮಾಡದಂತೆ ನಿರ್ಬಂಧಿಸಿದೆ. ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿತ್ತು. ಲಖಿಂಪುರ ಖೇರಿ ಹಿಂಸಾಚಾರದ

ಕಳೆದ ವರ್ಷ ಜನವರಿ 25 ರಂದು, ಘೋರ ಘಟನೆಯ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ನಾಲ್ವರು ರೈತರಾದ ಗುರುವಿಂದರ್ ಸಿಂಗ್, ಕಮಲ್ಜೀತ್ ಸಿಂಗ್, ಗುರುಪ್ರೀತ್ ಸಿಂಗ್ ಮತ್ತು ವಿಚಿತ್ರಾ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಅಕ್ಟೋಬರ್ 3, 2021 ರಂದು ಸಂಭವಿಸಿದ ಈ ದುರ್ಘಟನೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಕೊಲ್ಲಲ್ಪಟ್ಟರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಹಿಂಸಾಚಾರ ಭುಗಿಲೆದ್ದಿತ್ತು.

ಸ್ಪೋರ್ಟ್ಸ್ ಯುಟಿಲಿಟಿ ವಾಹನದಿಂದ ನಾಲ್ವರು ರೈತರನ್ನು ಅಡಿಗೆ ಹಾಕಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ಉದ್ರಿಕ್ತಗೊಂಡ ರೈತರ ಗುಂಪು ಒಬ್ಬ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತನೂ ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಜನವರಿ 25 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಆಶಿಶ್ ಮಿಶ್ರಾ ಉತ್ತರ ಪ್ರದೇಶ ಅಥವಾ ದೆಹಲಿಯಲ್ಲಿ ಉಳಿಯಬಾರದು ಎಂದು ಹೇಳಿತ್ತು. ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಮಾಡಲಾಗಿತ್ತು. ನಂತರ, ಸೆಪ್ಟೆಂಬರ್ 26 ರಂದು, ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಅವರ ಮಗಳ ಚಿಕಿತ್ಸೆಗಾಗಿ ದೆಹಲಿಗೆ ಭೇಟಿ ನೀಡಲು ಮತ್ತು ಉಳಿಯಲು ಅನುವು ಮಾಡಿಕೊಡಲು ಅವರ ನೀಡಿದ್ದ ಜಾಮೀನಿನ ಷರತ್ತುಗಳನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿತ್ತು.

ಇದನ್ನೂ ಓದಿ: ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...