Homeಮುಖಪುಟಲಖಿಂಪುರ್ ಹತ್ಯಾಕಾಂಡ: ಕೊಲೆ ಆರೋಪಿ ಆಶಿಶ್ ಮಿಶ್ರಾ ಮರಳಿ ಜೈಲಿಗೆ

ಲಖಿಂಪುರ್ ಹತ್ಯಾಕಾಂಡ: ಕೊಲೆ ಆರೋಪಿ ಆಶಿಶ್ ಮಿಶ್ರಾ ಮರಳಿ ಜೈಲಿಗೆ

ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಕಳೆದ ಸೋಮವಾರ ರದ್ದುಗೊಳಿಸಿತ್ತು ಮತ್ತು ಒಂದು ವಾರದಲ್ಲಿ ಶರಣಾಗುವಂತೆ ಆದೇಶಿಸಿತ್ತು.

- Advertisement -
- Advertisement -

ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತ ಹತ್ಯಾಕಾಂಡ ನಡೆಸಿದ ಆರೋಪ ಹೊತ್ತಿರುವ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಇಂದು ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದು, ಅವರನ್ನು ಮರಳಿ ಲಖಿಂಪುರ್ ಜೈಲಿಗೆ ಕಳಿಸಲಾಗಿದೆ.

ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಮಧ್ಯೆ ಫೆಬ್ರವರಿ 10ರಂದು ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಅದನ್ನು ಅಕ್ಟೋಬರ್ 3 ರಂದು ನಡೆದ ಹತ್ಯಾಕಾಂಡದಲ್ಲಿ ಹತ್ಯೆಗೀಡಾದ ರೈತರ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಕಳೆದ ಸೋಮವಾರ ರದ್ದುಗೊಳಿಸಿತ್ತು ಮತ್ತು ಒಂದು ವಾರದಲ್ಲಿ ಶರಣಾಗುವಂತೆ ಆದೇಶಿಸಿತ್ತು.

“ಆಶಿಶ್ ಮಿಶ್ರಾ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಶರಣಾಗಲು ಕೋರ್ಟ್ ವಾರಗಳ ಕಾಲಾವಕಾಶ ನೀಡಿತ್ತು. ಸೋಮವಾರ ಆ ಕಾಲಾವಕಾಶದ ಕೊನೆಯ ದಿನವಾಗಿತ್ತು. ಹಾಗಾಗಿ ಒಂದು ದಿನ ಮೊದಲೆ ಶರಣಾಗಿದ್ದಾರೆ” ಎಂದು ಅವರ ಕೀಲರಾದ ಅವದೇಶ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಲಖಿಂಪುರ ಖೇರಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಶಿಶ್ ಮಿಶ್ರಾ, ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಕಾರು ಚಲಾಯಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳಲು ಯುಪಿ ಪೋಲಿಸ್ ಮತ್ತು ಆಡಳಿತವು ವಿಳಂಬ ಮಾಡುತ್ತಿದೆ ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ, ಘಟನೆ ನಡೆದು ಹಲವಾರು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆಶಿಶ್‌‌‌ ಮಿಶ್ರಾ ಸಾಕ್ಷಿಗಳಿಗೆ ಬೆದರಿಕೆಯೊಡ್ಡಿರುವ ಕಾರಣ ಅವರ ಜಾಮೀನು ರದ್ದುಗೊಳಿಸಬೇಕು ಎಂದು ರೈತರ ಕುಟುಂಬಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ಕಳೆದ ಮಾರ್ಚ್‌ನಲ್ಲಿ ಪ್ರಕರಣದ ಸಾಕ್ಷಿಯೊಬ್ಬರ ಮೇಲೆ ದಾಳಿ ನಡೆಸಲಾಯಿತ್ತು. ಅಲ್ಲದೆ ಇತ್ತೀಚಿಗೆ ಯುಪಿ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಉಲ್ಲೇಖಿಸಿ ದಾಳಿಕೋರರು ತಮಗೆ ಬೆದರಿಕೆ ಹಾಕಿದ್ದರು” ಎಂದು ಅವರು ಆರೋಪಿಸಿದ್ದಾರೆ.

“ಸಂತ್ರಸ್ತರಿಗೆ ಪರಿಣಾಮಕಾರಿ ವಿಚಾರಣೆಯ ಅವಕಾಶವನ್ನು ನಿರಾಕರಿಸಲಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಸುಪ್ರೀಂ ನ್ಯಾಯಮೂರ್ತಿ ಸೂರ್ಯ ಕಾಂತ್ ಜಾಮೀನು ರದ್ದುಗೊಳಿಸುವಾಗ ಹೇಳಿದ್ದರು. ಪ್ರತ್ಯೇಕ ಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...