Homeಮುಖಪುಟಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

ಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅಲಿಯಾಸ್ ಮೋನು ಸೇರಿದಂತೆ 14 ಜನರ ವಿರುದ್ಧ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ 5,000 ಪುಟಗಳ ಮೊದಲ ಚಾರ್ಜ್‌ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಅಕ್ಟೋಬರ್ 3ರಂದು ಲಖಿಂಪುರ್‌ ಖೇರಿಯ ಟಿಕೋನಿಯಾ ಪ್ರದೇಶದಲ್ಲಿ ಬೆಂಗಾವಲು ವಾಹನಗಳನ್ನು ರೈತರ ಮೇಲೆ ಹರಿಸಲಾಗಿತ್ತು. ನಾಲ್ವರು ಪ್ರತಿಭಟನಾನಿರತ ರೈತರು ಮತ್ತು ಓರ್ವ ಪತ್ರಕರ್ತ ಸಾವಿಗೀಡಾಗಿದ್ದರು. ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂರು ಜನರು ಸಾವನ್ನಪ್ಪಿದರು.

“ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಬಗ್ಗೆ 14 ಜನರ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಲಖೀಂಪುರದ ಸ್ಥಳೀಯ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ” ಎಂದು ಹಿರಿಯ ಪ್ರಾಸಿಕ್ಯೂಟಿಂಗ್ ಅಧಿಕಾರಿ ಎಸ್‌ಪಿ ಯಾದವ್ ಹೇಳಿದ್ದಾರೆ.

ಆರೋಪಪಟ್ಟಿಯಲ್ಲಿರುವ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯೂ ಜೈಲಿನಲ್ಲಿದ್ದಾರೆ. ವೀರೇಂದ್ರ ಕುಮಾರ್ ಶುಕ್ಲಾ ಎಂಬ ವ್ಯಕ್ತಿಯ ವಿರುದ್ಧ ಸಾಕ್ಷ್ಯ ನಾಶದ ಆರೋಪವಿದೆ. ಅವರನ್ನು ಬಂಧಿಸಿಲ್ಲ. ಆದರೆ ಎಸ್‌ಐಟಿ ಅವರಿಗೆ ನೋಟಿಸ್ ನೀಡಿದೆ. ಶುಕ್ಲಾ ಅವರು ಅಜಯ್ ಮಿಶ್ರಾ ಅವರ ದೂರದ ಸಂಬಂಧಿ ಮತ್ತು ಬ್ಲಾಕ್ ಮುಖಂಡರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಅವರ ಸೋದರಳಿಯ ಲಕ್ನೋ ಮೂಲದ ಅಂಕಿತ್ ದಾಸ್ ಅವರನ್ನೂ ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಆರೋಪಿಗಳಾದ ಆಶಿಶ್ ಮಿಶ್ರಾ, ವೀರೇಂದ್ರ ಶುಕ್ಲಾ ಮತ್ತು ಅಂಕಿತ್ ದಾಸ್ ನಂದನ್ ದಾಸ್ ಭಿಸ್ಟ್, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಲತೀಫ್ ಅಲಿಯಾಸ್ ಕಲ್ಲೆ, ಶೇಖರ್ ಭಾರತಿ, ಸುಮಿತ್ ಜೈಸ್ವಾಲ್, ಆಶಿಶ್ ಪಾಂಡೆ, ಲುವ್ಕುಶ್, ಶಿಶುಪಾಲ್, ಉಲ್ಲಾಸ್ ಕುಮಾರ್ ತ್ರಿವೇದಿ, ಉಲ್ಲಾಸ್ ಕುಮಾರ್ ತ್ರಿವೇದಿ, ರಿಂಕು ರಾಣಾ ಮತ್ತು ಧರ್ಮೇಂದ್ರ ಕುಮಾರ್ ಬಂಜಾರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಇತರರ ಜಾಮೀನು ಅರ್ಜಿಯು ಲಖಿಂಪುರ ಖೇರಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಲಖಿಂಪುರ್‌ ಖೇರಿ ಘಟನೆಯನ್ನು “ಯೋಜಿತ ಪಿತೂರಿ” ಎಂದು ಇತ್ತೀಚೆಗೆ ಎಸ್‌ಐಟಿ ವರದಿ ಮಾಡಿತ್ತು. ಇಲ್ಲಿನ ಹತ್ಯೆಯು “ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ಸಂಭವಿಸಿಲ್ಲ. ಉದ್ದೇಶಪೂರ್ವಕವಾಗಿ ಕೊಲ್ಲಲಾಗಿದೆ” ಎಂದು ತಿಳಿಸಿತ್ತು.

ಆಶಿಶ್ ಮಿಶ್ರಾ ಸೇರಿದಂತೆ 13 ಜನರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 147 (ಗಲಭೆ), 148 (ಗಲಭೆ, ಮಾರಣಾಂತಿಕ ಶಸ್ತ್ರಾಸ್ತ್ರ), 149 (ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧ), 302 (ಕೊಲೆ), 307 (ಕೊಲೆಯ ಯತ್ನ), 326 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಾಯಗೊಳಿಸುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 427 (ಐವತ್ತು ರೂಪಾಯಿಗಳ ಮೊತ್ತಕ್ಕೆ ಹಾನಿ ಉಂಟುಮಾಡುವ ಕಿಡಿಗೇಡಿತನ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ವೀರೇಂದ್ರ ಕುಮಾರ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 201 (ಸಾಕ್ಷ್ಯಾನಾಶ) ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.


ಇದನ್ನೂ ಓದಿರಿ: Explained: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಬೊಮ್ಮಾಯಿ ಮುಂದಾಗಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...