Homeಮುಖಪುಟಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

ಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅಲಿಯಾಸ್ ಮೋನು ಸೇರಿದಂತೆ 14 ಜನರ ವಿರುದ್ಧ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ 5,000 ಪುಟಗಳ ಮೊದಲ ಚಾರ್ಜ್‌ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಅಕ್ಟೋಬರ್ 3ರಂದು ಲಖಿಂಪುರ್‌ ಖೇರಿಯ ಟಿಕೋನಿಯಾ ಪ್ರದೇಶದಲ್ಲಿ ಬೆಂಗಾವಲು ವಾಹನಗಳನ್ನು ರೈತರ ಮೇಲೆ ಹರಿಸಲಾಗಿತ್ತು. ನಾಲ್ವರು ಪ್ರತಿಭಟನಾನಿರತ ರೈತರು ಮತ್ತು ಓರ್ವ ಪತ್ರಕರ್ತ ಸಾವಿಗೀಡಾಗಿದ್ದರು. ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂರು ಜನರು ಸಾವನ್ನಪ್ಪಿದರು.

“ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಬಗ್ಗೆ 14 ಜನರ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಲಖೀಂಪುರದ ಸ್ಥಳೀಯ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ” ಎಂದು ಹಿರಿಯ ಪ್ರಾಸಿಕ್ಯೂಟಿಂಗ್ ಅಧಿಕಾರಿ ಎಸ್‌ಪಿ ಯಾದವ್ ಹೇಳಿದ್ದಾರೆ.

ಆರೋಪಪಟ್ಟಿಯಲ್ಲಿರುವ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯೂ ಜೈಲಿನಲ್ಲಿದ್ದಾರೆ. ವೀರೇಂದ್ರ ಕುಮಾರ್ ಶುಕ್ಲಾ ಎಂಬ ವ್ಯಕ್ತಿಯ ವಿರುದ್ಧ ಸಾಕ್ಷ್ಯ ನಾಶದ ಆರೋಪವಿದೆ. ಅವರನ್ನು ಬಂಧಿಸಿಲ್ಲ. ಆದರೆ ಎಸ್‌ಐಟಿ ಅವರಿಗೆ ನೋಟಿಸ್ ನೀಡಿದೆ. ಶುಕ್ಲಾ ಅವರು ಅಜಯ್ ಮಿಶ್ರಾ ಅವರ ದೂರದ ಸಂಬಂಧಿ ಮತ್ತು ಬ್ಲಾಕ್ ಮುಖಂಡರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಅವರ ಸೋದರಳಿಯ ಲಕ್ನೋ ಮೂಲದ ಅಂಕಿತ್ ದಾಸ್ ಅವರನ್ನೂ ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಆರೋಪಿಗಳಾದ ಆಶಿಶ್ ಮಿಶ್ರಾ, ವೀರೇಂದ್ರ ಶುಕ್ಲಾ ಮತ್ತು ಅಂಕಿತ್ ದಾಸ್ ನಂದನ್ ದಾಸ್ ಭಿಸ್ಟ್, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಲತೀಫ್ ಅಲಿಯಾಸ್ ಕಲ್ಲೆ, ಶೇಖರ್ ಭಾರತಿ, ಸುಮಿತ್ ಜೈಸ್ವಾಲ್, ಆಶಿಶ್ ಪಾಂಡೆ, ಲುವ್ಕುಶ್, ಶಿಶುಪಾಲ್, ಉಲ್ಲಾಸ್ ಕುಮಾರ್ ತ್ರಿವೇದಿ, ಉಲ್ಲಾಸ್ ಕುಮಾರ್ ತ್ರಿವೇದಿ, ರಿಂಕು ರಾಣಾ ಮತ್ತು ಧರ್ಮೇಂದ್ರ ಕುಮಾರ್ ಬಂಜಾರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಇತರರ ಜಾಮೀನು ಅರ್ಜಿಯು ಲಖಿಂಪುರ ಖೇರಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಲಖಿಂಪುರ್‌ ಖೇರಿ ಘಟನೆಯನ್ನು “ಯೋಜಿತ ಪಿತೂರಿ” ಎಂದು ಇತ್ತೀಚೆಗೆ ಎಸ್‌ಐಟಿ ವರದಿ ಮಾಡಿತ್ತು. ಇಲ್ಲಿನ ಹತ್ಯೆಯು “ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ಸಂಭವಿಸಿಲ್ಲ. ಉದ್ದೇಶಪೂರ್ವಕವಾಗಿ ಕೊಲ್ಲಲಾಗಿದೆ” ಎಂದು ತಿಳಿಸಿತ್ತು.

ಆಶಿಶ್ ಮಿಶ್ರಾ ಸೇರಿದಂತೆ 13 ಜನರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 147 (ಗಲಭೆ), 148 (ಗಲಭೆ, ಮಾರಣಾಂತಿಕ ಶಸ್ತ್ರಾಸ್ತ್ರ), 149 (ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧ), 302 (ಕೊಲೆ), 307 (ಕೊಲೆಯ ಯತ್ನ), 326 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಾಯಗೊಳಿಸುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 427 (ಐವತ್ತು ರೂಪಾಯಿಗಳ ಮೊತ್ತಕ್ಕೆ ಹಾನಿ ಉಂಟುಮಾಡುವ ಕಿಡಿಗೇಡಿತನ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ವೀರೇಂದ್ರ ಕುಮಾರ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 201 (ಸಾಕ್ಷ್ಯಾನಾಶ) ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.


ಇದನ್ನೂ ಓದಿರಿ: Explained: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಬೊಮ್ಮಾಯಿ ಮುಂದಾಗಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...