Homeಮುಖಪುಟಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

ಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅಲಿಯಾಸ್ ಮೋನು ಸೇರಿದಂತೆ 14 ಜನರ ವಿರುದ್ಧ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ 5,000 ಪುಟಗಳ ಮೊದಲ ಚಾರ್ಜ್‌ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಅಕ್ಟೋಬರ್ 3ರಂದು ಲಖಿಂಪುರ್‌ ಖೇರಿಯ ಟಿಕೋನಿಯಾ ಪ್ರದೇಶದಲ್ಲಿ ಬೆಂಗಾವಲು ವಾಹನಗಳನ್ನು ರೈತರ ಮೇಲೆ ಹರಿಸಲಾಗಿತ್ತು. ನಾಲ್ವರು ಪ್ರತಿಭಟನಾನಿರತ ರೈತರು ಮತ್ತು ಓರ್ವ ಪತ್ರಕರ್ತ ಸಾವಿಗೀಡಾಗಿದ್ದರು. ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂರು ಜನರು ಸಾವನ್ನಪ್ಪಿದರು.

“ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಬಗ್ಗೆ 14 ಜನರ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಲಖೀಂಪುರದ ಸ್ಥಳೀಯ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ” ಎಂದು ಹಿರಿಯ ಪ್ರಾಸಿಕ್ಯೂಟಿಂಗ್ ಅಧಿಕಾರಿ ಎಸ್‌ಪಿ ಯಾದವ್ ಹೇಳಿದ್ದಾರೆ.

ಆರೋಪಪಟ್ಟಿಯಲ್ಲಿರುವ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯೂ ಜೈಲಿನಲ್ಲಿದ್ದಾರೆ. ವೀರೇಂದ್ರ ಕುಮಾರ್ ಶುಕ್ಲಾ ಎಂಬ ವ್ಯಕ್ತಿಯ ವಿರುದ್ಧ ಸಾಕ್ಷ್ಯ ನಾಶದ ಆರೋಪವಿದೆ. ಅವರನ್ನು ಬಂಧಿಸಿಲ್ಲ. ಆದರೆ ಎಸ್‌ಐಟಿ ಅವರಿಗೆ ನೋಟಿಸ್ ನೀಡಿದೆ. ಶುಕ್ಲಾ ಅವರು ಅಜಯ್ ಮಿಶ್ರಾ ಅವರ ದೂರದ ಸಂಬಂಧಿ ಮತ್ತು ಬ್ಲಾಕ್ ಮುಖಂಡರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಅವರ ಸೋದರಳಿಯ ಲಕ್ನೋ ಮೂಲದ ಅಂಕಿತ್ ದಾಸ್ ಅವರನ್ನೂ ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಆರೋಪಿಗಳಾದ ಆಶಿಶ್ ಮಿಶ್ರಾ, ವೀರೇಂದ್ರ ಶುಕ್ಲಾ ಮತ್ತು ಅಂಕಿತ್ ದಾಸ್ ನಂದನ್ ದಾಸ್ ಭಿಸ್ಟ್, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಲತೀಫ್ ಅಲಿಯಾಸ್ ಕಲ್ಲೆ, ಶೇಖರ್ ಭಾರತಿ, ಸುಮಿತ್ ಜೈಸ್ವಾಲ್, ಆಶಿಶ್ ಪಾಂಡೆ, ಲುವ್ಕುಶ್, ಶಿಶುಪಾಲ್, ಉಲ್ಲಾಸ್ ಕುಮಾರ್ ತ್ರಿವೇದಿ, ಉಲ್ಲಾಸ್ ಕುಮಾರ್ ತ್ರಿವೇದಿ, ರಿಂಕು ರಾಣಾ ಮತ್ತು ಧರ್ಮೇಂದ್ರ ಕುಮಾರ್ ಬಂಜಾರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಇತರರ ಜಾಮೀನು ಅರ್ಜಿಯು ಲಖಿಂಪುರ ಖೇರಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಲಖಿಂಪುರ್‌ ಖೇರಿ ಘಟನೆಯನ್ನು “ಯೋಜಿತ ಪಿತೂರಿ” ಎಂದು ಇತ್ತೀಚೆಗೆ ಎಸ್‌ಐಟಿ ವರದಿ ಮಾಡಿತ್ತು. ಇಲ್ಲಿನ ಹತ್ಯೆಯು “ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ಸಂಭವಿಸಿಲ್ಲ. ಉದ್ದೇಶಪೂರ್ವಕವಾಗಿ ಕೊಲ್ಲಲಾಗಿದೆ” ಎಂದು ತಿಳಿಸಿತ್ತು.

ಆಶಿಶ್ ಮಿಶ್ರಾ ಸೇರಿದಂತೆ 13 ಜನರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 147 (ಗಲಭೆ), 148 (ಗಲಭೆ, ಮಾರಣಾಂತಿಕ ಶಸ್ತ್ರಾಸ್ತ್ರ), 149 (ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧ), 302 (ಕೊಲೆ), 307 (ಕೊಲೆಯ ಯತ್ನ), 326 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಾಯಗೊಳಿಸುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 427 (ಐವತ್ತು ರೂಪಾಯಿಗಳ ಮೊತ್ತಕ್ಕೆ ಹಾನಿ ಉಂಟುಮಾಡುವ ಕಿಡಿಗೇಡಿತನ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ವೀರೇಂದ್ರ ಕುಮಾರ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 201 (ಸಾಕ್ಷ್ಯಾನಾಶ) ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.


ಇದನ್ನೂ ಓದಿರಿ: Explained: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಬೊಮ್ಮಾಯಿ ಮುಂದಾಗಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...