Homeಮುಖಪುಟಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

ಲಖಿಂಪುರ್‌ಖೇರಿ ಪ್ರಕರಣ: 14 ಆರೋಪಿಗಳ ವಿರುದ್ಧ ಚಾರ್ಜ್‌‌ಶೀಟ್‌ ಸಲ್ಲಿಕೆ

- Advertisement -
- Advertisement -

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅಲಿಯಾಸ್ ಮೋನು ಸೇರಿದಂತೆ 14 ಜನರ ವಿರುದ್ಧ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ 5,000 ಪುಟಗಳ ಮೊದಲ ಚಾರ್ಜ್‌ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಅಕ್ಟೋಬರ್ 3ರಂದು ಲಖಿಂಪುರ್‌ ಖೇರಿಯ ಟಿಕೋನಿಯಾ ಪ್ರದೇಶದಲ್ಲಿ ಬೆಂಗಾವಲು ವಾಹನಗಳನ್ನು ರೈತರ ಮೇಲೆ ಹರಿಸಲಾಗಿತ್ತು. ನಾಲ್ವರು ಪ್ರತಿಭಟನಾನಿರತ ರೈತರು ಮತ್ತು ಓರ್ವ ಪತ್ರಕರ್ತ ಸಾವಿಗೀಡಾಗಿದ್ದರು. ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇನ್ನೂ ಮೂರು ಜನರು ಸಾವನ್ನಪ್ಪಿದರು.

“ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಬಗ್ಗೆ 14 ಜನರ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಲಖೀಂಪುರದ ಸ್ಥಳೀಯ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ” ಎಂದು ಹಿರಿಯ ಪ್ರಾಸಿಕ್ಯೂಟಿಂಗ್ ಅಧಿಕಾರಿ ಎಸ್‌ಪಿ ಯಾದವ್ ಹೇಳಿದ್ದಾರೆ.

ಆರೋಪಪಟ್ಟಿಯಲ್ಲಿರುವ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯೂ ಜೈಲಿನಲ್ಲಿದ್ದಾರೆ. ವೀರೇಂದ್ರ ಕುಮಾರ್ ಶುಕ್ಲಾ ಎಂಬ ವ್ಯಕ್ತಿಯ ವಿರುದ್ಧ ಸಾಕ್ಷ್ಯ ನಾಶದ ಆರೋಪವಿದೆ. ಅವರನ್ನು ಬಂಧಿಸಿಲ್ಲ. ಆದರೆ ಎಸ್‌ಐಟಿ ಅವರಿಗೆ ನೋಟಿಸ್ ನೀಡಿದೆ. ಶುಕ್ಲಾ ಅವರು ಅಜಯ್ ಮಿಶ್ರಾ ಅವರ ದೂರದ ಸಂಬಂಧಿ ಮತ್ತು ಬ್ಲಾಕ್ ಮುಖಂಡರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ರಾಜ್ಯಸಭಾ ಸದಸ್ಯ ಅಖಿಲೇಶ್ ದಾಸ್ ಅವರ ಸೋದರಳಿಯ ಲಕ್ನೋ ಮೂಲದ ಅಂಕಿತ್ ದಾಸ್ ಅವರನ್ನೂ ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಆರೋಪಿಗಳಾದ ಆಶಿಶ್ ಮಿಶ್ರಾ, ವೀರೇಂದ್ರ ಶುಕ್ಲಾ ಮತ್ತು ಅಂಕಿತ್ ದಾಸ್ ನಂದನ್ ದಾಸ್ ಭಿಸ್ಟ್, ಸತ್ಯಂ ತ್ರಿಪಾಠಿ ಅಲಿಯಾಸ್ ಸತ್ಯ ಪ್ರಕಾಶ್ ತ್ರಿಪಾಠಿ, ಲತೀಫ್ ಅಲಿಯಾಸ್ ಕಲ್ಲೆ, ಶೇಖರ್ ಭಾರತಿ, ಸುಮಿತ್ ಜೈಸ್ವಾಲ್, ಆಶಿಶ್ ಪಾಂಡೆ, ಲುವ್ಕುಶ್, ಶಿಶುಪಾಲ್, ಉಲ್ಲಾಸ್ ಕುಮಾರ್ ತ್ರಿವೇದಿ, ಉಲ್ಲಾಸ್ ಕುಮಾರ್ ತ್ರಿವೇದಿ, ರಿಂಕು ರಾಣಾ ಮತ್ತು ಧರ್ಮೇಂದ್ರ ಕುಮಾರ್ ಬಂಜಾರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು, ಇತರರ ಜಾಮೀನು ಅರ್ಜಿಯು ಲಖಿಂಪುರ ಖೇರಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಲಖಿಂಪುರ್‌ ಖೇರಿ ಘಟನೆಯನ್ನು “ಯೋಜಿತ ಪಿತೂರಿ” ಎಂದು ಇತ್ತೀಚೆಗೆ ಎಸ್‌ಐಟಿ ವರದಿ ಮಾಡಿತ್ತು. ಇಲ್ಲಿನ ಹತ್ಯೆಯು “ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ಸಂಭವಿಸಿಲ್ಲ. ಉದ್ದೇಶಪೂರ್ವಕವಾಗಿ ಕೊಲ್ಲಲಾಗಿದೆ” ಎಂದು ತಿಳಿಸಿತ್ತು.

ಆಶಿಶ್ ಮಿಶ್ರಾ ಸೇರಿದಂತೆ 13 ಜನರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 147 (ಗಲಭೆ), 148 (ಗಲಭೆ, ಮಾರಣಾಂತಿಕ ಶಸ್ತ್ರಾಸ್ತ್ರ), 149 (ಕಾನೂನುಬಾಹಿರ ಸಭೆಯ ಪ್ರತಿಯೊಬ್ಬ ಸದಸ್ಯರು ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧ), 302 (ಕೊಲೆ), 307 (ಕೊಲೆಯ ಯತ್ನ), 326 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಗಾಯಗೊಳಿಸುವುದು), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 427 (ಐವತ್ತು ರೂಪಾಯಿಗಳ ಮೊತ್ತಕ್ಕೆ ಹಾನಿ ಉಂಟುಮಾಡುವ ಕಿಡಿಗೇಡಿತನ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ವೀರೇಂದ್ರ ಕುಮಾರ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 201 (ಸಾಕ್ಷ್ಯಾನಾಶ) ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.


ಇದನ್ನೂ ಓದಿರಿ: Explained: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಬೊಮ್ಮಾಯಿ ಮುಂದಾಗಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...