Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...