Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...