Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...