Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....