Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...