Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...