Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...