Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...