Homeಕರ್ನಾಟಕಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

- Advertisement -
- Advertisement -

ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ.

ಸರ್ಕಾರಿ ರಜೆ ದಿನದಂದು (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಸಲಾದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂದು ‘ದಿ ಫೈಲ್’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಈ ಕೃತ್ಯಕ್ಕೆ ತಮ್ಮ ವಾಹನವನ್ನು (ಕೆಎ-01-ಜಿ-5898) ಕಳುಹಿಸಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರು ಹೇಳಿಕೊಂಡಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್ ರಸ್ತೆಯಲ್ಲಿ (ಅಕ್ಟೋಬರ್ 24ರಂದು) ಜಿ-5898 ಸಂಖ್ಯೆಯ ವಾಹನವು ಬಳಕೆಯಾಗಿತ್ತು ಎಂಬ ಸಂಗತಿಯು ಪ್ರಕರಣಕ್ಕೆ ಹೊಸ ತಿರುವುಗಳನ್ನು ನೀಡುತ್ತಿದೆ.

ಸರ್ಕಾರಿ ರಜೆ ದಿನವಾಗಿದ್ದ ಅಕ್ಟೋಬರ್ 24ರಂದು ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ನಿಂತಿದ್ದ ಕೆಎ-01 ಜಿ-5898 ಸಂಖ್ಯೆಯ ಸರ್ಕಾರಿ ವಾಹನದ ಚಾಲಕನನ್ನು ಕರ್ನಾಟಕ ರಾಷ್ಟ್ರಸಮಿತಿಯ ಕಾರ್ಯಕರ್ತರೊಬ್ಬರು ಪ್ರಶ್ನಿಸಿದ್ದರು. ಸರ್ಕಾರಿ ವಾಹನದ ದುರುಪಯೋಗ ನಡೆಯುತ್ತಿದೆ ಎಂದು ವಿಡಿಯೊ ಮಾಡಿಕೊಂಡು ಅನುಮಾನಗೊಂಡು ಪ್ರಶ್ನಿಸಿದಾಗ, “ಮುಖ್ಯಮಂತ್ರಿಯ ಕಾರ್ಯಾಲಯದಿಂದ ಕಳಿಸಲಾಗಿದೆ, ದೀಪಾವಳಿ ಗಿಫ್ಟ್ ಕೊಡಲು ಬಂದಿದ್ದೇನೆ” ಎಂದು ಉತ್ತರಿಸಿದ್ದರು.

ಅಕ್ಟೋಬರ್‌ 24ರ ಸಂಜೆ 6.34ರ ವೇಳೆಗೆ ‘ಕೆ.ಆರ್‌.ಎಸ್‌. ಪಕ್ಷ ಬೆಂಗಳೂರು’ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಲಾಗಿದೆ. “ಸರ್ಕಾರಿ ವಾಹನ ದುರುಪಯೋಗ: ಇಂದು (ದಿನಾಂಕ 24 ಅಕ್ಟೋಬರ್) ಸರ್ಕಾರಿ ರಜಾ ದಿನವಾಗಿದ್ದು ಸಂಜೆ ಸುಮಾರು ಗಂಟೆ 5ಯಲ್ಲಿ ಕುಮಾರಸ್ವಾಮಿ ಬಡಾವಣೆಯ ಪೈಪ್ ಲೈನ್ ರಸ್ತೆಯ ಬಳಿ ಕಂಡುಬಂದ ಸರ್ಕಾರಿ ವಾಹನ ಸಂಖ್ಯೆ ಕೆಎ 01ಜಿ 5898, ಇನ್ನೋವಾ. ಅದರ ಚಾಲಕನನ್ನು ಪ್ರಶ್ನೆ ಮಾಡಲಾಗಿ ಅವರು ಆ ವಾಹನವು ಮುಖ್ಯಮಂತ್ರಿ ಕಚೇರಿಯ ವಾಹನವಾಗಿದ್ದು ದೀಪಾವಳಿಯ ಸಿಹಿ ಹಂಚಿಕೆಗೆ ಓಡಾಡುತ್ತಿರುವುದಾಗಿ ಹೇಳಿದ್ದಾರೆ. ಈ ರೀತಿಯಲ್ಲಿ ಸರ್ಕಾರಿ ವಾಹನದ ದುರುಪಯೋಗ ಎಷ್ಟು ಸರಿ?” ಎಂದು ಪೋಸ್ಟ್ ಕೆಆರ್‌ಎಸ್‌ ಪೋಸ್ಟ್ ಮಾಡಿದೆ.

ಆ ಕಾರಿನ ಸಂಖ್ಯೆಯೂ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾದ ಇನ್ನೋವಾ ವಾಹನದ ಸಂಖ್ಯೆಯೂ ಒಂದೇ ಆಗಿದೆ. ಪತ್ರಕರ್ತರಿಗೆ ಲಕ್ಷಗಟ್ಟಲೇ ನಗದು ಮತ್ತು ಉಡುಗೊರೆ ನೀಡಲು ಇದೇ ವಾಹನವನ್ನು ಬಳಕೆ ಮಾಡಲಾಗಿತ್ತೇ ಎಂಬ ಅನುಮಾನಗಳು ಬಲಗೊಳ್ಳಲು ಕೆಆರ್‌ಎಸ್ ಪಕ್ಷದ ಪೋಸ್ಟ್‌ ಅವಕಾಶ ಒದಗಿಸಿದೆ.

ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿರುವ ಕಾರಿನ ಕುರಿತು ಸರ್ಕಾರ ನೀಡಿರುವ ನಿರ್ದೇಶನದ ಪ್ರತಿಯನ್ನು ‘ಫೈಲ್‌’ ವರದಿ ಮಾಡಿದೆ. “ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್ ಕೃಷ್ಣ ಅವರಿಗೆ ಈ ಹಿಂದೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಿಗೆ ಒದಗಿಸಲಾದ ವಾಹನ ಸಂಖ್ಯೆ ಕೆಎ-01-ಜಿ-5898 ವಾಹನವನ್ನು ಒದಗಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಗಳಿಗೆ 2022ರ ಸೆ.29ರಂದು ನಿರ್ದೇಶಿಸಿದ್ದರು. ಅದರಂತೆ ಮೋಹನ್ ಕೃಷ್ಣ ಅವರಿಗೆ ಕೆಎ-01 ಜಿ-5898 ಸಂಖ್ಯೆಯ ವಾಹನವನ್ನು ಕುಮಾರಕೃಪಾ ಅತಿಥಿ ಗೃಹದ ವಿಶೇಷಾಧಿಕಾರಿಯವರು ಹಂಚಿಕೆ ಮಾಡಿದ್ದರು” ಎಂದು ಪತ್ರವನ್ನು ಉಲ್ಲೇಖಿಸಲಾಗಿದೆ. ವಾಟ್ಸ್‌ಅಪ್‌ ಮೂಲಕ ಮೋಹನ್‌ ಕೃಷ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕಳುಹಿಸಲಾಗಿದ್ದು, ‘No it hasn’t been sent For that’ ಎಂಬ ಪ್ರತಿಕ್ರಿಯೆಯನ್ನು ಬಿಟ್ಟರೆ ಮತ್ಯಾವುದೇ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

‘ನಾನುಗೌರಿ.ಕಾಂ’ ತಂಡದೊಂದಿಗೆ ಮಾತನಾಡಿದ ಮೋಹನ್‌ ಕೃಷ್ಣ ಅವರು, “ನನಗೆ ಆರೋಗ್ಯ ಸರಿ ಇಲ್ಲದೆ ಮನೆಯಲ್ಲಿದ್ದೇನೆ. ರಜೆ ದಿನದಂದು ಸರ್ಕಾರಿ ವಾಹನದಲ್ಲಿ ಸ್ವೀಟ್ ತೆಗೆದುಕೊಂಡು ಹೋಗಿದ್ದು ನಿಜ. ಆದರೆ ನನ್ನ ಸ್ನೇಹಿತನ ಮನೆಗೆ ಸ್ವೀಟ್ ಕಳುಹಿಸಿದ್ದೆನೇ ಹೊರತು ಪತ್ರಕರ್ತರಿಗಲ್ಲ. ಕುಮಾರಸ್ವಾಮಿ ಬಡಾವಣೆಯಲ್ಲಿ ಸುಮಾರು ನಲವತ್ತು ವರ್ಷಗಳ ಹಳೆಯ ಸ್ನೇಹಿತ ವಾಸವಿದ್ದಾನೆ” ಎಂದು ತಿಳಿಸಿದರು.

“‘ದಿ ಫೈಲ್‌ಗೆ ಪ್ರತಿಕ್ರಿಯೆ ನೀಡಲು ಕರೆ ಮಾಡಿದ್ದೆ. ಅವರು ಕರೆ ಸ್ವೀಕರಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.

‘ದಿ ಫೈಲ್‌’ ಸಂಪಾದಕರಾದ ಮಹಾಂತೇಶ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ವಾಟ್ಸ್‌ಆಪ್‌ ಮೂಲಕ ಕಳುಹಿಸಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನಿರೀಕ್ಷಿಸಿದ್ದೇನೆ. ನಿಮಗೆ ಕೊಟ್ಟ ಉತ್ತರವನ್ನು ಲಿಖಿತವಾಗಿ ನೀಡಿದರೆ ಮುಗಿಯಿತು. ಇಲ್ಲಿ ರಜಾ ದಿನದಂದು ಸರ್ಕಾರಿ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಗಳಿಗೆ ಉಪಯೋಗಿಸುವುದು ಸರಿಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...