Homeಮುಖಪುಟವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

ವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

- Advertisement -
- Advertisement -

ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ಶೋಭಾಯಾತ್ರೆ ನಡೆಸಲು ವಿಶ್ವ ಹಿಂದೂ ಪರಿ‍ಷತ್‌ಗೆ ಅನುಮತಿ ನೀಡಿದರೆ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ರೈತ ಸಂಘಟನೆಗಳು ಮತ್ತು ಇತರ ಸಮುದಾಯಗಳು ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ ಎಂದು ಘೋಷಿಸಿವೆ.

36 ರೈತ ಸಂಘಟನೆಗಳು ಮತ್ತು ಸಮುದಾಯಗಳ ಪ್ರತಿನಿಧಿಗಳು ರಾಜಸ್ಥಾನದ ಅಲ್ವಾರ್‌ನಲ್ಲಿ ಶನಿವಾರದಂದು ಮಹಾಪಂಚಾಯತ್‌ ನಡೆಸಿದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದಾರೆ.

”ನುಹ್, ಮಿಯೋ ಮುಸ್ಲಿಂ ಸಮುದಾಯದ ನೆಲೆಯಾಗಿದೆ. ಇದು ಹರಿಯಾಣದ ಏಕೈಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾಗಿದೆ. ಇದು ಯಾವಾಗಲೂ ಶಾಂತಿಯುತ ಪ್ರದೇಶವಾಗಿದೆ ಆದರೆ ಜುಲೈ 31ರಂದು “ಸಾಮಾಜ ಘಾತುಕ ಶಕ್ತಿಗಳಿಂದ ಇಲ್ಲಿ ಗಲಭೆಗಳು ನಡೆದಿವೆ” ಎಂದು ಪಂಚಾಯತ್ ಅಸೆಂಬ್ಲಿಯಲ್ಲಿ ಸ್ಪೀಕರ್‌ಗಳು ಹೇಳಿದ್ದಾರೆ.

ಈ ಗಲಭೆ ಹರಿಯಾಣದ ಇತರ ನಗರಗಳಿಗೂ ಹರಡಿತು, ಆರು ಜನ ಸಾವಿಗೀಡಾದರು ಮತ್ತು ಕನಿಷ್ಠ 80 ಜನರು ಗಾಯಗೊಂಡರು. ವಿಶ್ವ ಹಿಂದೂ ಪರಿಷತ್ ಮತ್ತು ಅದರ ಉಗ್ರಗಾಮಿ ಸಂಘಟನೆ ಬಜರಂಗದಳದಿಂದ ಹಿಂಸಾಚಾರ ಹೆಚ್ಚಾಯಿತು. ಮಸೀದಿಗೆ ಬೆಂಕಿ ಹಚ್ಚಲಾಯಿತು. ರಾಜ್ಯ ಸರ್ಕಾರ ಮುಸ್ಲಿಮರ ಮನೆಗಳು, ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್‌ನಿಂದ ಧ್ವಂಸಗೊಳಿಸುವ ಕ್ರಮವನ್ನು ಅನುಸರಿಸದವು ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಆಗಸ್ಟ್ 28ರಂದು ವಿಎಚ್‌ಪಿ ಯಾತ್ರೆಗೆ ಕಳೆದ ವಾರ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಲಾಗಿತ್ತು. ಆದಾಗ್ಯೂ, ”ಅನುಮತಿಯ ಅಗತ್ಯವಿಲ್ಲ” ಎಂದು ವಿಎಚ್‌ಪಿ ಶನಿವಾರ ಘೋಷಿಸಿತ್ತು.

”ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಸೆಕ್ಷನ್ 144ನ್ನು ಸ್ಪಷ್ಟವಾಗಿ ವಿಧಿಸಲಾಗಿರುವುದು ಸ್ಥಳೀಯ ನಾಗರಿಕರ ಭಯವನ್ನು ಕಡಿಮೆ ಮಾಡಿಲ್ಲ” ಎಂದು ರೈತ ಸಂಘಟನೆಗಳು ಹೇಳಿವೆ.

ಪ್ರಮುಖ ರೈತರ ನಾಯಕ ರಾಕೇಶ್ ಟಿಕೈತ್ ಅವರು ”ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ನುಹ್‌ನಲ್ಲಿ ಯಾತ್ರೆಯನ್ನು ಕೈಗೊಳ್ಳಲು ಅನುಮತಿ ನೀಡಿದರೆ, ನಾವು ಟ್ರ್ಯಾಕ್ಟರ್ ಅನ್ನು ಹೊರತೆಗೆದು ರ್ಯಾಲಿ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...