Homeಮುಖಪುಟವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

ವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

- Advertisement -
- Advertisement -

ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ಶೋಭಾಯಾತ್ರೆ ನಡೆಸಲು ವಿಶ್ವ ಹಿಂದೂ ಪರಿ‍ಷತ್‌ಗೆ ಅನುಮತಿ ನೀಡಿದರೆ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ರೈತ ಸಂಘಟನೆಗಳು ಮತ್ತು ಇತರ ಸಮುದಾಯಗಳು ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ ಎಂದು ಘೋಷಿಸಿವೆ.

36 ರೈತ ಸಂಘಟನೆಗಳು ಮತ್ತು ಸಮುದಾಯಗಳ ಪ್ರತಿನಿಧಿಗಳು ರಾಜಸ್ಥಾನದ ಅಲ್ವಾರ್‌ನಲ್ಲಿ ಶನಿವಾರದಂದು ಮಹಾಪಂಚಾಯತ್‌ ನಡೆಸಿದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದಾರೆ.

”ನುಹ್, ಮಿಯೋ ಮುಸ್ಲಿಂ ಸಮುದಾಯದ ನೆಲೆಯಾಗಿದೆ. ಇದು ಹರಿಯಾಣದ ಏಕೈಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾಗಿದೆ. ಇದು ಯಾವಾಗಲೂ ಶಾಂತಿಯುತ ಪ್ರದೇಶವಾಗಿದೆ ಆದರೆ ಜುಲೈ 31ರಂದು “ಸಾಮಾಜ ಘಾತುಕ ಶಕ್ತಿಗಳಿಂದ ಇಲ್ಲಿ ಗಲಭೆಗಳು ನಡೆದಿವೆ” ಎಂದು ಪಂಚಾಯತ್ ಅಸೆಂಬ್ಲಿಯಲ್ಲಿ ಸ್ಪೀಕರ್‌ಗಳು ಹೇಳಿದ್ದಾರೆ.

ಈ ಗಲಭೆ ಹರಿಯಾಣದ ಇತರ ನಗರಗಳಿಗೂ ಹರಡಿತು, ಆರು ಜನ ಸಾವಿಗೀಡಾದರು ಮತ್ತು ಕನಿಷ್ಠ 80 ಜನರು ಗಾಯಗೊಂಡರು. ವಿಶ್ವ ಹಿಂದೂ ಪರಿಷತ್ ಮತ್ತು ಅದರ ಉಗ್ರಗಾಮಿ ಸಂಘಟನೆ ಬಜರಂಗದಳದಿಂದ ಹಿಂಸಾಚಾರ ಹೆಚ್ಚಾಯಿತು. ಮಸೀದಿಗೆ ಬೆಂಕಿ ಹಚ್ಚಲಾಯಿತು. ರಾಜ್ಯ ಸರ್ಕಾರ ಮುಸ್ಲಿಮರ ಮನೆಗಳು, ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್‌ನಿಂದ ಧ್ವಂಸಗೊಳಿಸುವ ಕ್ರಮವನ್ನು ಅನುಸರಿಸದವು ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಆಗಸ್ಟ್ 28ರಂದು ವಿಎಚ್‌ಪಿ ಯಾತ್ರೆಗೆ ಕಳೆದ ವಾರ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಲಾಗಿತ್ತು. ಆದಾಗ್ಯೂ, ”ಅನುಮತಿಯ ಅಗತ್ಯವಿಲ್ಲ” ಎಂದು ವಿಎಚ್‌ಪಿ ಶನಿವಾರ ಘೋಷಿಸಿತ್ತು.

”ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಸೆಕ್ಷನ್ 144ನ್ನು ಸ್ಪಷ್ಟವಾಗಿ ವಿಧಿಸಲಾಗಿರುವುದು ಸ್ಥಳೀಯ ನಾಗರಿಕರ ಭಯವನ್ನು ಕಡಿಮೆ ಮಾಡಿಲ್ಲ” ಎಂದು ರೈತ ಸಂಘಟನೆಗಳು ಹೇಳಿವೆ.

ಪ್ರಮುಖ ರೈತರ ನಾಯಕ ರಾಕೇಶ್ ಟಿಕೈತ್ ಅವರು ”ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ನುಹ್‌ನಲ್ಲಿ ಯಾತ್ರೆಯನ್ನು ಕೈಗೊಳ್ಳಲು ಅನುಮತಿ ನೀಡಿದರೆ, ನಾವು ಟ್ರ್ಯಾಕ್ಟರ್ ಅನ್ನು ಹೊರತೆಗೆದು ರ್ಯಾಲಿ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...