Homeಮುಖಪುಟವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

ವಿಎಚ್‌ಪಿ ಯಾತ್ರೆಗೆ ಅನುಮತಿ ನೀಡಿದ್ರೆ, ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ: ಹರಿಯಾಣ ಸರ್ಕಾರಕ್ಕೆ ರೈತರ ಎಚ್ಚರಿಕೆ

- Advertisement -
- Advertisement -

ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ಶೋಭಾಯಾತ್ರೆ ನಡೆಸಲು ವಿಶ್ವ ಹಿಂದೂ ಪರಿ‍ಷತ್‌ಗೆ ಅನುಮತಿ ನೀಡಿದರೆ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ರೈತ ಸಂಘಟನೆಗಳು ಮತ್ತು ಇತರ ಸಮುದಾಯಗಳು ಲಕ್ಷಗಟ್ಟಲೆ ಟ್ರಾಕ್ಟರ್‌ಗಳನ್ನು ಬೀದಿಗಿಳಿಸುತ್ತೇವೆ ಎಂದು ಘೋಷಿಸಿವೆ.

36 ರೈತ ಸಂಘಟನೆಗಳು ಮತ್ತು ಸಮುದಾಯಗಳ ಪ್ರತಿನಿಧಿಗಳು ರಾಜಸ್ಥಾನದ ಅಲ್ವಾರ್‌ನಲ್ಲಿ ಶನಿವಾರದಂದು ಮಹಾಪಂಚಾಯತ್‌ ನಡೆಸಿದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದಾರೆ.

”ನುಹ್, ಮಿಯೋ ಮುಸ್ಲಿಂ ಸಮುದಾಯದ ನೆಲೆಯಾಗಿದೆ. ಇದು ಹರಿಯಾಣದ ಏಕೈಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾಗಿದೆ. ಇದು ಯಾವಾಗಲೂ ಶಾಂತಿಯುತ ಪ್ರದೇಶವಾಗಿದೆ ಆದರೆ ಜುಲೈ 31ರಂದು “ಸಾಮಾಜ ಘಾತುಕ ಶಕ್ತಿಗಳಿಂದ ಇಲ್ಲಿ ಗಲಭೆಗಳು ನಡೆದಿವೆ” ಎಂದು ಪಂಚಾಯತ್ ಅಸೆಂಬ್ಲಿಯಲ್ಲಿ ಸ್ಪೀಕರ್‌ಗಳು ಹೇಳಿದ್ದಾರೆ.

ಈ ಗಲಭೆ ಹರಿಯಾಣದ ಇತರ ನಗರಗಳಿಗೂ ಹರಡಿತು, ಆರು ಜನ ಸಾವಿಗೀಡಾದರು ಮತ್ತು ಕನಿಷ್ಠ 80 ಜನರು ಗಾಯಗೊಂಡರು. ವಿಶ್ವ ಹಿಂದೂ ಪರಿಷತ್ ಮತ್ತು ಅದರ ಉಗ್ರಗಾಮಿ ಸಂಘಟನೆ ಬಜರಂಗದಳದಿಂದ ಹಿಂಸಾಚಾರ ಹೆಚ್ಚಾಯಿತು. ಮಸೀದಿಗೆ ಬೆಂಕಿ ಹಚ್ಚಲಾಯಿತು. ರಾಜ್ಯ ಸರ್ಕಾರ ಮುಸ್ಲಿಮರ ಮನೆಗಳು, ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್‌ನಿಂದ ಧ್ವಂಸಗೊಳಿಸುವ ಕ್ರಮವನ್ನು ಅನುಸರಿಸದವು ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಆಗಸ್ಟ್ 28ರಂದು ವಿಎಚ್‌ಪಿ ಯಾತ್ರೆಗೆ ಕಳೆದ ವಾರ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಲಾಗಿತ್ತು. ಆದಾಗ್ಯೂ, ”ಅನುಮತಿಯ ಅಗತ್ಯವಿಲ್ಲ” ಎಂದು ವಿಎಚ್‌ಪಿ ಶನಿವಾರ ಘೋಷಿಸಿತ್ತು.

”ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಸೆಕ್ಷನ್ 144ನ್ನು ಸ್ಪಷ್ಟವಾಗಿ ವಿಧಿಸಲಾಗಿರುವುದು ಸ್ಥಳೀಯ ನಾಗರಿಕರ ಭಯವನ್ನು ಕಡಿಮೆ ಮಾಡಿಲ್ಲ” ಎಂದು ರೈತ ಸಂಘಟನೆಗಳು ಹೇಳಿವೆ.

ಪ್ರಮುಖ ರೈತರ ನಾಯಕ ರಾಕೇಶ್ ಟಿಕೈತ್ ಅವರು ”ಹರಿಯಾಣ ಸರ್ಕಾರವು ಆಗಸ್ಟ್ 28 ರಂದು ನುಹ್‌ನಲ್ಲಿ ಯಾತ್ರೆಯನ್ನು ಕೈಗೊಳ್ಳಲು ಅನುಮತಿ ನೀಡಿದರೆ, ನಾವು ಟ್ರ್ಯಾಕ್ಟರ್ ಅನ್ನು ಹೊರತೆಗೆದು ರ್ಯಾಲಿ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...