Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...