Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...