Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...