Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...