Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...