Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...