Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...