Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...