Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...