Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...