Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...