Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...