Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...