Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...