Homeಕರೋನಾ ತಲ್ಲಣಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.

- Advertisement -
- Advertisement -

ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ವರದಿಯಾಗಿ ಎಂಟು ತಿಂಗಳಾದರೂ ಒಂದೇ ಒಂದು ಸೋಂಕಿನ ವರದಿಯಿಲ್ಲದ ಭಾರತದ ಏಕೈಕ ಸ್ಥಳವಾಗಿದೆ ಲಕ್ಷದ್ವೀಪ. ಲಕ್ಷದ್ವೀಪದ 10 ಜನವಸತಿ ದ್ವೀಪಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗ ಮತ್ತೆ ಶಾಲೆಗೆ ಬಂದಿದ್ದಾರೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಕೇಂದ್ರಾಡಳಿತ ಪ್ರದೇಶವಾಗಿರುವ ಲಕ್ಷದ್ವೀಪದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸೇರಿಂದತೆ, ರಕ್ಷಕ-ಶಿಕ್ಷಕ ಸಂಘಗಳೊಂದಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸಿದ ಸಭೆಯ ನಂತರ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅವರು 1 ರಿಂದ 5 ನೇ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸೆಪ್ಟೆಂಬರ್ 21 ರಂದು 6 ರಿಂದ 12 ನೇ ವರೆಗಿನ ತರಗತಿಗಳು ದ್ವೀಪದಲ್ಲಿ ಪುನರಾರಂಭಗೊಂಡಿದ್ದವು.

ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

“ಗೇಟ್‌ನಲ್ಲಿ ಮಕ್ಕಳಿಗಾಗಿ ಥರ್ಮಲ್ ಸ್ಕ್ರೀನಿಂಗ್ ಇದೆ. ಪ್ರತಿಯೊಬ್ಬರೂ ಮಾಸ್ಕ್‌‌ಗಳನ್ನು ಧರಿಸಬೇಕು. ತರಗತಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಕೈ ತೊಳೆಯಬೇಕು. ಒಂದು ಬೆಂಚಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅನುಮತಿ ಇದೆ” ಎಂದು ಶಾಲೆಯ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

PC: Indian Express.

ಶಾಲೆಯಲ್ಲಿ ಮಧ್ಯಾಹ್ನದವರೆಗೆ ಮಾತ್ರ ಪರ್ಯಾಯ ತರಗತಿಗಳು ನಡೆಯಲಿದ್ದು, “2 ಮತ್ತು 4 ನೇ ತರಗತಿಗಳು ಸೋಮವಾರ ನಡೆಯಲಿವೆ, ಇತರ ತರಗತಿಗಳು ಮರುದಿನ, ಹೀಗೆ… ಪ್ರತಿ ತರಗತಿಯ ವಿದ್ಯಾರ್ಥಿಗಳು ವಾರದಲ್ಲಿ ಮೂರು ದಿನ ಶಾಲೆಗೆ ಬರುತ್ತಾರೆ” ಎಂದು ಅವರು ಹೇಳುತ್ತಾರೆ. ಇಂಟರ್ನೆಟ್ ಸಮಸ್ಯೆಗಳಿಂದಾಗಿ ಪೂರ್ಣ ಸಮಯದ ಆನ್‌ಲೈನ್ ತರಗತಿಗಳಿಗೆ ಯಾವುದೇ ಅವಕಾಶವಿಲ್ಲದ ಕಾರಣ ಶಾಲೆಗಳ ಪುನರಾರಂಭ ಅತ್ಯಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಕವರತ್ತಿ ದ್ವೀಪದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು, ”ಚಿಕ್ಕ ಮಕ್ಕಳು ದಿನಕ್ಕೆ ಸುಮಾರು ನಾಲ್ಕು ಗಂಟೆಗಳ ಕಾಲ ಮಾಸ್ಕ್‌ ಧರಿಸುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ.

64,000 ಜನಸಂಖ್ಯೆ ಹೊಂದಿರುವ ಲಕ್ಷದ್ವೀಪವು ಕೊರೊನಾವನ್ನು ತಡೆಯಲು ಯಶಸ್ವಿಯಾಗಿದೆ. ಭಾರತದಾದ್ಯಂತ ಲಾಕ್‌‌ಡೌನ್ ಘೋಷಿಸುವ ಮುಂಚೆಯೆ ಲಕ್ಷದ್ವೀಪದ ಅಧಿಕಾರಿಗಳು ಪ್ರವಾಸಿಗರಿಗೆ ವಾಯುನೆಲೆ ಮತ್ತು ಬಂದರುಗಳನ್ನು ಮುಚ್ಚಿದ್ದರು. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿದ್ದ ನಿವಾಸಿಗಳಿಗೆ ಮಾತ್ರ ದ್ವೀಪಕ್ಕೆ ಮರಳಲು ಅವಕಾಶವಿತ್ತು.

ಲಕ್ಷದ್ವೀಪಕ್ಕೆ ನಿವಾಸಿಗಳು ಪ್ರವೇಶಿಸಲು ಕೇರಳದ ಸರ್ಕಾರಿ ಅಧಿಕೃತ ಕ್ವಾರಂಟೈನ್ ಕೇಂದ್ರದಲ್ಲಿ 14 ದಿನಗಳ ಕಾಲ ಇರಬೇಕಾಗುತ್ತದೆ. ಇದರ ನಂತರ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ. ಇಲ್ಲಿ ಅವರು ಕೊರೊನಾ ನೆಗೆಟಿವ್ ಆಗಿದ್ದರೂ ದ್ವೀಪದಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್ ಇರಲೇಬೇಕಾಗಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ವಿಡಿಯೋ ನೋಡಿ: ಕೊರೊನಾ ಜೊತೆಗೆ ಇನ್ನೆರಡು ವೈರಸ್‌ಗಳ ದಾಳಿ. ಅವು ಯಾವುವು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...