Homeಮುಖಪುಟಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

ಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

- Advertisement -
- Advertisement -

ಮಾಲ್ಡೀವ್ಸ್‌ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಪ್ರವಾಸಿಗರು ಮಾಲ್ಡೀವ್ಸ್‌ ಬದಲು ನಮ್ಮದೇ ಭಾರತದ ಲಕ್ಷದ್ವೀಪಕ್ಕೆ ತೆರಳಿ ಎಂಬ ಅಭಿಯಾನವೇ ಆರಂಭವಾಗಿದೆ. ‘ಚಲೋ ಲಕ್ಷದ್ವೀಪ್’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಈ ನಡುವೆ ಲಕ್ಷದ್ವೀಪದ ಏಕೈಕ ಸಂಸದ ಮೊಹಮ್ಮದ್ ಫೈಝಲ್ ಅವರು ಲಕ್ಷದ್ವೀಪದ ವಸ್ತುಸ್ಥಿತಿಯನ್ನು ತೆರದಿಟ್ಟಿದ್ದು, ಸೀಮಿತ ವಿಮಾನಗಳು ಮತ್ತು ಕೇವಲ 150 ಹೋಟೆಲ್ ಕೊಠಡಿಗಳಿರುವ ದ್ವೀಪಕ್ಕೆ ಹೆಚ್ಚಿನ ಪ್ರವಾಸಿಗರು ಬರುವುದು ಮತ್ತು ತಂಗುವುದು ಆಸಾಧ್ಯ ಎಂದಿದ್ದಾರೆ.

“ಲಕ್ಷದ್ವೀಪ ಹವಳದಿಂದ ರಚಿಸಲ್ಪಟ್ಟಿದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಪರಿಸರದ ವಿಷಯದಲ್ಲಿ ಬಹಳ ದುರ್ಬಲವಾಗಿದೆ”. ಹೆಚ್ಚಿನ ಪ್ರವಾಸಿಗರು ಬಂದರೆ ತಡೆದುಕೊಳ್ಳುವ ಶಕ್ತಿ ಈ ದ್ವೀಪಗಳಿಗೆ ಇಲ್ಲ
ಎಂದು ಎನ್‌ಡಿ ಟಿವಿ ಜೊತೆ ಮಾತನಾಡುವ ವೇಳೆ ಫೈಝಲ್ ಕಳವಳ ವ್ಯಕ್ತಪಡಿಸಿದ್ದಾರೆ.

“ಲಕ್ಷದ್ವೀಪದ ಸಾಮಾರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನ್ಯಾಯಮೂರ್ತಿ ರವೀಂದ್ರನ್ ಆಯೋಗವು “ಸಮಗ್ರ ದ್ವೀಪ ನಿರ್ವಹಣಾ ಯೋಜನೆ” ಯನ್ನು ರೂಪಿಸಿದೆ. ದ್ವೀಪದಲ್ಲಿ ರಸ್ತೆ, ಜೆಟ್ಟಿಗಳು ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇದು ಒಂದು ಮೂಲ ‘ಅಭಿವೃದ್ಧಿ ಬೈಬಲ್’ (ಮೂಲ ರೂಪುರೇಷೆ) ಆಗಿದೆ. ರವೀಂದ್ರನ್ ಆಯೋಗದ ವರದಿಯು ಪ್ರವಾಸಿಗರನ್ನು ಸ್ವೀಕರಿಸಬಹುದಾದ ದ್ವೀಪದ ಸಾಮಾರ್ಥ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಫೈಝಲ್ ತಿಳಿಸಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದಾದರೂ, ಅದಕ್ಕೊಂದು ನಿಯಂತ್ರಣ ವ್ಯವಸ್ಥೆ ಬೇಕಿದೆ. ಅತ್ಯಂತ ನಿಯಂತ್ರಿತ ಪ್ರವಾಸೋದ್ಯಮದಿಂದ ಗರಿಷ್ಠ ಆದಾಯವನ್ನು ಸಂಗ್ರಹಿಸಲು ಯೋಜನೆ ರೂಪಿಸಬೇಕಿದೆ. ಬರುವ ಪ್ರವಾಸಿಗರು ಕೂಡ ಪರಿಸರದ ಬಗ್ಗೆ ಸಂಪೂರ್ಣ ಕಾಳಜಿ ಹೊಂದಿರಬೇಕು ಎಂದು ಫೈಝಲ್ ಹೇಳಿದ್ದಾರೆ.

ಮಾಲ್ಡೀವ್ಸ್‌ ಅನ್ನು ವಿರೋಧಿಸುವ ಭರದಲ್ಲಿ ಎಲ್ಲರೂ ಲಕ್ಷದ್ವೀಪದ ಕಡೆ ಬೊಟ್ಟು ಮಾಡುತ್ತಿದ್ದಾರೆ. ಜನರಿಗೆ ಲಕ್ಷದ್ವೀಪದ ಮೇಲಿನ ಪ್ರೀತಿ ಉಕ್ಕಿ ಬಂದಿದೆ. ಆದರೆ, ಲಕ್ಷದ್ವೀಪಗಳ ಒಟ್ಟು 36 ದ್ವೀಪಗಳಲ್ಲಿ ಕೇವಲ 10 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಪ್ರವಾಸಿಗರು ಬಂದರೂ ಈ ದ್ವೀಪಗಳಿಗೇ ಬರಬೇಕು. ಪ್ರಸ್ತುತ ಲಕ್ಷದ್ವೀಪದ ಜನಸಂಖ್ಯೆಯ ಶೇಕಡಾ 8-10ರಷ್ಟು ಜನರು ಮಾತ್ರ ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಫೈಝಲ್ ತಿಳಿಸಿದ್ದಾರೆ.

ಮಾಲ್ಡೀವ್ಸ್‌ ಸಚಿವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಜಕಾರಣಿಗಳು, ಸೆಲೆಬ್ರೆಟಿಗಳು ಮತ್ತು ಸಾಮಾನ್ಯ ಜನರಿಗೆ ಒಂದೇ ಸಮನೆ ಲಕ್ಷದ್ವೀಪದ ಮೇಲಿನ ಪ್ರೀತಿ ಒಂದೇ ಸಮನೆ ಉಕ್ಕಿ ಬಂದಿದೆ. ಆದರೆ, ಇವರು ಯಾರಿಗೂ ದ್ವೀಪದ ವಸ್ತುಸ್ಥಿತಿ ಗೊತ್ತಿಲ್ಲ. ಪ್ರವಾಸೋಧ್ಯಮ ಅಭಿವೃದ್ದಿ ಎಂದು ಹೇಳುವಾಗ ದ್ವೀಪದ ಜನರು ಭಯಪಡುತ್ತಿದ್ದಾರೆ ಎಂದು ಸಂಸದ ಫೈಝಲ್ ತನ್ನ ಊರಿನ ಕುರಿತು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Lakshadweep is eco sensitive Island. Any mindless development in order to get tourists in to the island may wreck havoc to the otherwise pristine islands. Hope people at power will weigh all pros and cons before taking drastic measures.

  2. This is actual reality check ,to develop Lakshadweep, it requires nearly 10 years,
    Since the infrastructure and connectivity of Lakshadweep with other parts of India is to developed on war footing basis,then only our goal will be reached.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...