Homeಮುಖಪುಟಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

ಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

- Advertisement -
- Advertisement -

ಮಾಲ್ಡೀವ್ಸ್‌ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಪ್ರವಾಸಿಗರು ಮಾಲ್ಡೀವ್ಸ್‌ ಬದಲು ನಮ್ಮದೇ ಭಾರತದ ಲಕ್ಷದ್ವೀಪಕ್ಕೆ ತೆರಳಿ ಎಂಬ ಅಭಿಯಾನವೇ ಆರಂಭವಾಗಿದೆ. ‘ಚಲೋ ಲಕ್ಷದ್ವೀಪ್’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಈ ನಡುವೆ ಲಕ್ಷದ್ವೀಪದ ಏಕೈಕ ಸಂಸದ ಮೊಹಮ್ಮದ್ ಫೈಝಲ್ ಅವರು ಲಕ್ಷದ್ವೀಪದ ವಸ್ತುಸ್ಥಿತಿಯನ್ನು ತೆರದಿಟ್ಟಿದ್ದು, ಸೀಮಿತ ವಿಮಾನಗಳು ಮತ್ತು ಕೇವಲ 150 ಹೋಟೆಲ್ ಕೊಠಡಿಗಳಿರುವ ದ್ವೀಪಕ್ಕೆ ಹೆಚ್ಚಿನ ಪ್ರವಾಸಿಗರು ಬರುವುದು ಮತ್ತು ತಂಗುವುದು ಆಸಾಧ್ಯ ಎಂದಿದ್ದಾರೆ.

“ಲಕ್ಷದ್ವೀಪ ಹವಳದಿಂದ ರಚಿಸಲ್ಪಟ್ಟಿದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಪರಿಸರದ ವಿಷಯದಲ್ಲಿ ಬಹಳ ದುರ್ಬಲವಾಗಿದೆ”. ಹೆಚ್ಚಿನ ಪ್ರವಾಸಿಗರು ಬಂದರೆ ತಡೆದುಕೊಳ್ಳುವ ಶಕ್ತಿ ಈ ದ್ವೀಪಗಳಿಗೆ ಇಲ್ಲ
ಎಂದು ಎನ್‌ಡಿ ಟಿವಿ ಜೊತೆ ಮಾತನಾಡುವ ವೇಳೆ ಫೈಝಲ್ ಕಳವಳ ವ್ಯಕ್ತಪಡಿಸಿದ್ದಾರೆ.

“ಲಕ್ಷದ್ವೀಪದ ಸಾಮಾರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನ್ಯಾಯಮೂರ್ತಿ ರವೀಂದ್ರನ್ ಆಯೋಗವು “ಸಮಗ್ರ ದ್ವೀಪ ನಿರ್ವಹಣಾ ಯೋಜನೆ” ಯನ್ನು ರೂಪಿಸಿದೆ. ದ್ವೀಪದಲ್ಲಿ ರಸ್ತೆ, ಜೆಟ್ಟಿಗಳು ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇದು ಒಂದು ಮೂಲ ‘ಅಭಿವೃದ್ಧಿ ಬೈಬಲ್’ (ಮೂಲ ರೂಪುರೇಷೆ) ಆಗಿದೆ. ರವೀಂದ್ರನ್ ಆಯೋಗದ ವರದಿಯು ಪ್ರವಾಸಿಗರನ್ನು ಸ್ವೀಕರಿಸಬಹುದಾದ ದ್ವೀಪದ ಸಾಮಾರ್ಥ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಫೈಝಲ್ ತಿಳಿಸಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದಾದರೂ, ಅದಕ್ಕೊಂದು ನಿಯಂತ್ರಣ ವ್ಯವಸ್ಥೆ ಬೇಕಿದೆ. ಅತ್ಯಂತ ನಿಯಂತ್ರಿತ ಪ್ರವಾಸೋದ್ಯಮದಿಂದ ಗರಿಷ್ಠ ಆದಾಯವನ್ನು ಸಂಗ್ರಹಿಸಲು ಯೋಜನೆ ರೂಪಿಸಬೇಕಿದೆ. ಬರುವ ಪ್ರವಾಸಿಗರು ಕೂಡ ಪರಿಸರದ ಬಗ್ಗೆ ಸಂಪೂರ್ಣ ಕಾಳಜಿ ಹೊಂದಿರಬೇಕು ಎಂದು ಫೈಝಲ್ ಹೇಳಿದ್ದಾರೆ.

ಮಾಲ್ಡೀವ್ಸ್‌ ಅನ್ನು ವಿರೋಧಿಸುವ ಭರದಲ್ಲಿ ಎಲ್ಲರೂ ಲಕ್ಷದ್ವೀಪದ ಕಡೆ ಬೊಟ್ಟು ಮಾಡುತ್ತಿದ್ದಾರೆ. ಜನರಿಗೆ ಲಕ್ಷದ್ವೀಪದ ಮೇಲಿನ ಪ್ರೀತಿ ಉಕ್ಕಿ ಬಂದಿದೆ. ಆದರೆ, ಲಕ್ಷದ್ವೀಪಗಳ ಒಟ್ಟು 36 ದ್ವೀಪಗಳಲ್ಲಿ ಕೇವಲ 10 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಪ್ರವಾಸಿಗರು ಬಂದರೂ ಈ ದ್ವೀಪಗಳಿಗೇ ಬರಬೇಕು. ಪ್ರಸ್ತುತ ಲಕ್ಷದ್ವೀಪದ ಜನಸಂಖ್ಯೆಯ ಶೇಕಡಾ 8-10ರಷ್ಟು ಜನರು ಮಾತ್ರ ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಫೈಝಲ್ ತಿಳಿಸಿದ್ದಾರೆ.

ಮಾಲ್ಡೀವ್ಸ್‌ ಸಚಿವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಜಕಾರಣಿಗಳು, ಸೆಲೆಬ್ರೆಟಿಗಳು ಮತ್ತು ಸಾಮಾನ್ಯ ಜನರಿಗೆ ಒಂದೇ ಸಮನೆ ಲಕ್ಷದ್ವೀಪದ ಮೇಲಿನ ಪ್ರೀತಿ ಒಂದೇ ಸಮನೆ ಉಕ್ಕಿ ಬಂದಿದೆ. ಆದರೆ, ಇವರು ಯಾರಿಗೂ ದ್ವೀಪದ ವಸ್ತುಸ್ಥಿತಿ ಗೊತ್ತಿಲ್ಲ. ಪ್ರವಾಸೋಧ್ಯಮ ಅಭಿವೃದ್ದಿ ಎಂದು ಹೇಳುವಾಗ ದ್ವೀಪದ ಜನರು ಭಯಪಡುತ್ತಿದ್ದಾರೆ ಎಂದು ಸಂಸದ ಫೈಝಲ್ ತನ್ನ ಊರಿನ ಕುರಿತು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Lakshadweep is eco sensitive Island. Any mindless development in order to get tourists in to the island may wreck havoc to the otherwise pristine islands. Hope people at power will weigh all pros and cons before taking drastic measures.

  2. This is actual reality check ,to develop Lakshadweep, it requires nearly 10 years,
    Since the infrastructure and connectivity of Lakshadweep with other parts of India is to developed on war footing basis,then only our goal will be reached.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...