Homeಮುಖಪುಟಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

ಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

- Advertisement -
- Advertisement -

ಮಾಲ್ಡೀವ್ಸ್‌ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಪ್ರವಾಸಿಗರು ಮಾಲ್ಡೀವ್ಸ್‌ ಬದಲು ನಮ್ಮದೇ ಭಾರತದ ಲಕ್ಷದ್ವೀಪಕ್ಕೆ ತೆರಳಿ ಎಂಬ ಅಭಿಯಾನವೇ ಆರಂಭವಾಗಿದೆ. ‘ಚಲೋ ಲಕ್ಷದ್ವೀಪ್’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಈ ನಡುವೆ ಲಕ್ಷದ್ವೀಪದ ಏಕೈಕ ಸಂಸದ ಮೊಹಮ್ಮದ್ ಫೈಝಲ್ ಅವರು ಲಕ್ಷದ್ವೀಪದ ವಸ್ತುಸ್ಥಿತಿಯನ್ನು ತೆರದಿಟ್ಟಿದ್ದು, ಸೀಮಿತ ವಿಮಾನಗಳು ಮತ್ತು ಕೇವಲ 150 ಹೋಟೆಲ್ ಕೊಠಡಿಗಳಿರುವ ದ್ವೀಪಕ್ಕೆ ಹೆಚ್ಚಿನ ಪ್ರವಾಸಿಗರು ಬರುವುದು ಮತ್ತು ತಂಗುವುದು ಆಸಾಧ್ಯ ಎಂದಿದ್ದಾರೆ.

“ಲಕ್ಷದ್ವೀಪ ಹವಳದಿಂದ ರಚಿಸಲ್ಪಟ್ಟಿದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಪರಿಸರದ ವಿಷಯದಲ್ಲಿ ಬಹಳ ದುರ್ಬಲವಾಗಿದೆ”. ಹೆಚ್ಚಿನ ಪ್ರವಾಸಿಗರು ಬಂದರೆ ತಡೆದುಕೊಳ್ಳುವ ಶಕ್ತಿ ಈ ದ್ವೀಪಗಳಿಗೆ ಇಲ್ಲ
ಎಂದು ಎನ್‌ಡಿ ಟಿವಿ ಜೊತೆ ಮಾತನಾಡುವ ವೇಳೆ ಫೈಝಲ್ ಕಳವಳ ವ್ಯಕ್ತಪಡಿಸಿದ್ದಾರೆ.

“ಲಕ್ಷದ್ವೀಪದ ಸಾಮಾರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನ್ಯಾಯಮೂರ್ತಿ ರವೀಂದ್ರನ್ ಆಯೋಗವು “ಸಮಗ್ರ ದ್ವೀಪ ನಿರ್ವಹಣಾ ಯೋಜನೆ” ಯನ್ನು ರೂಪಿಸಿದೆ. ದ್ವೀಪದಲ್ಲಿ ರಸ್ತೆ, ಜೆಟ್ಟಿಗಳು ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇದು ಒಂದು ಮೂಲ ‘ಅಭಿವೃದ್ಧಿ ಬೈಬಲ್’ (ಮೂಲ ರೂಪುರೇಷೆ) ಆಗಿದೆ. ರವೀಂದ್ರನ್ ಆಯೋಗದ ವರದಿಯು ಪ್ರವಾಸಿಗರನ್ನು ಸ್ವೀಕರಿಸಬಹುದಾದ ದ್ವೀಪದ ಸಾಮಾರ್ಥ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಫೈಝಲ್ ತಿಳಿಸಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದಾದರೂ, ಅದಕ್ಕೊಂದು ನಿಯಂತ್ರಣ ವ್ಯವಸ್ಥೆ ಬೇಕಿದೆ. ಅತ್ಯಂತ ನಿಯಂತ್ರಿತ ಪ್ರವಾಸೋದ್ಯಮದಿಂದ ಗರಿಷ್ಠ ಆದಾಯವನ್ನು ಸಂಗ್ರಹಿಸಲು ಯೋಜನೆ ರೂಪಿಸಬೇಕಿದೆ. ಬರುವ ಪ್ರವಾಸಿಗರು ಕೂಡ ಪರಿಸರದ ಬಗ್ಗೆ ಸಂಪೂರ್ಣ ಕಾಳಜಿ ಹೊಂದಿರಬೇಕು ಎಂದು ಫೈಝಲ್ ಹೇಳಿದ್ದಾರೆ.

ಮಾಲ್ಡೀವ್ಸ್‌ ಅನ್ನು ವಿರೋಧಿಸುವ ಭರದಲ್ಲಿ ಎಲ್ಲರೂ ಲಕ್ಷದ್ವೀಪದ ಕಡೆ ಬೊಟ್ಟು ಮಾಡುತ್ತಿದ್ದಾರೆ. ಜನರಿಗೆ ಲಕ್ಷದ್ವೀಪದ ಮೇಲಿನ ಪ್ರೀತಿ ಉಕ್ಕಿ ಬಂದಿದೆ. ಆದರೆ, ಲಕ್ಷದ್ವೀಪಗಳ ಒಟ್ಟು 36 ದ್ವೀಪಗಳಲ್ಲಿ ಕೇವಲ 10 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಪ್ರವಾಸಿಗರು ಬಂದರೂ ಈ ದ್ವೀಪಗಳಿಗೇ ಬರಬೇಕು. ಪ್ರಸ್ತುತ ಲಕ್ಷದ್ವೀಪದ ಜನಸಂಖ್ಯೆಯ ಶೇಕಡಾ 8-10ರಷ್ಟು ಜನರು ಮಾತ್ರ ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಫೈಝಲ್ ತಿಳಿಸಿದ್ದಾರೆ.

ಮಾಲ್ಡೀವ್ಸ್‌ ಸಚಿವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಜಕಾರಣಿಗಳು, ಸೆಲೆಬ್ರೆಟಿಗಳು ಮತ್ತು ಸಾಮಾನ್ಯ ಜನರಿಗೆ ಒಂದೇ ಸಮನೆ ಲಕ್ಷದ್ವೀಪದ ಮೇಲಿನ ಪ್ರೀತಿ ಒಂದೇ ಸಮನೆ ಉಕ್ಕಿ ಬಂದಿದೆ. ಆದರೆ, ಇವರು ಯಾರಿಗೂ ದ್ವೀಪದ ವಸ್ತುಸ್ಥಿತಿ ಗೊತ್ತಿಲ್ಲ. ಪ್ರವಾಸೋಧ್ಯಮ ಅಭಿವೃದ್ದಿ ಎಂದು ಹೇಳುವಾಗ ದ್ವೀಪದ ಜನರು ಭಯಪಡುತ್ತಿದ್ದಾರೆ ಎಂದು ಸಂಸದ ಫೈಝಲ್ ತನ್ನ ಊರಿನ ಕುರಿತು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Lakshadweep is eco sensitive Island. Any mindless development in order to get tourists in to the island may wreck havoc to the otherwise pristine islands. Hope people at power will weigh all pros and cons before taking drastic measures.

  2. This is actual reality check ,to develop Lakshadweep, it requires nearly 10 years,
    Since the infrastructure and connectivity of Lakshadweep with other parts of India is to developed on war footing basis,then only our goal will be reached.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...