Homeಮುಖಪುಟಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

ಪ್ರವಾಸಿಗರ ಹರಿವು ತಡೆದುಕೊಳ್ಳುವ ಶಕ್ತಿ ಲಕ್ಷದ್ವೀಪಕ್ಕೆ ಇಲ್ಲ: ವಸ್ತುಸ್ಥಿತಿ ಬಿಚ್ಚಿಟ್ಟ ಸಂಸದ ಫೈಝಲ್

- Advertisement -
- Advertisement -

ಮಾಲ್ಡೀವ್ಸ್‌ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಪ್ರವಾಸಿಗರು ಮಾಲ್ಡೀವ್ಸ್‌ ಬದಲು ನಮ್ಮದೇ ಭಾರತದ ಲಕ್ಷದ್ವೀಪಕ್ಕೆ ತೆರಳಿ ಎಂಬ ಅಭಿಯಾನವೇ ಆರಂಭವಾಗಿದೆ. ‘ಚಲೋ ಲಕ್ಷದ್ವೀಪ್’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಈ ನಡುವೆ ಲಕ್ಷದ್ವೀಪದ ಏಕೈಕ ಸಂಸದ ಮೊಹಮ್ಮದ್ ಫೈಝಲ್ ಅವರು ಲಕ್ಷದ್ವೀಪದ ವಸ್ತುಸ್ಥಿತಿಯನ್ನು ತೆರದಿಟ್ಟಿದ್ದು, ಸೀಮಿತ ವಿಮಾನಗಳು ಮತ್ತು ಕೇವಲ 150 ಹೋಟೆಲ್ ಕೊಠಡಿಗಳಿರುವ ದ್ವೀಪಕ್ಕೆ ಹೆಚ್ಚಿನ ಪ್ರವಾಸಿಗರು ಬರುವುದು ಮತ್ತು ತಂಗುವುದು ಆಸಾಧ್ಯ ಎಂದಿದ್ದಾರೆ.

“ಲಕ್ಷದ್ವೀಪ ಹವಳದಿಂದ ರಚಿಸಲ್ಪಟ್ಟಿದೆ. ಇದು ಅತ್ಯಂತ ಸೂಕ್ಷ್ಮ ಮತ್ತು ಪರಿಸರದ ವಿಷಯದಲ್ಲಿ ಬಹಳ ದುರ್ಬಲವಾಗಿದೆ”. ಹೆಚ್ಚಿನ ಪ್ರವಾಸಿಗರು ಬಂದರೆ ತಡೆದುಕೊಳ್ಳುವ ಶಕ್ತಿ ಈ ದ್ವೀಪಗಳಿಗೆ ಇಲ್ಲ
ಎಂದು ಎನ್‌ಡಿ ಟಿವಿ ಜೊತೆ ಮಾತನಾಡುವ ವೇಳೆ ಫೈಝಲ್ ಕಳವಳ ವ್ಯಕ್ತಪಡಿಸಿದ್ದಾರೆ.

“ಲಕ್ಷದ್ವೀಪದ ಸಾಮಾರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನ್ಯಾಯಮೂರ್ತಿ ರವೀಂದ್ರನ್ ಆಯೋಗವು “ಸಮಗ್ರ ದ್ವೀಪ ನಿರ್ವಹಣಾ ಯೋಜನೆ” ಯನ್ನು ರೂಪಿಸಿದೆ. ದ್ವೀಪದಲ್ಲಿ ರಸ್ತೆ, ಜೆಟ್ಟಿಗಳು ಸೇರಿದಂತೆ ಇತರ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಇದು ಒಂದು ಮೂಲ ‘ಅಭಿವೃದ್ಧಿ ಬೈಬಲ್’ (ಮೂಲ ರೂಪುರೇಷೆ) ಆಗಿದೆ. ರವೀಂದ್ರನ್ ಆಯೋಗದ ವರದಿಯು ಪ್ರವಾಸಿಗರನ್ನು ಸ್ವೀಕರಿಸಬಹುದಾದ ದ್ವೀಪದ ಸಾಮಾರ್ಥ್ಯದ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಫೈಝಲ್ ತಿಳಿಸಿದ್ದಾರೆ.

ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸುವುದಾದರೂ, ಅದಕ್ಕೊಂದು ನಿಯಂತ್ರಣ ವ್ಯವಸ್ಥೆ ಬೇಕಿದೆ. ಅತ್ಯಂತ ನಿಯಂತ್ರಿತ ಪ್ರವಾಸೋದ್ಯಮದಿಂದ ಗರಿಷ್ಠ ಆದಾಯವನ್ನು ಸಂಗ್ರಹಿಸಲು ಯೋಜನೆ ರೂಪಿಸಬೇಕಿದೆ. ಬರುವ ಪ್ರವಾಸಿಗರು ಕೂಡ ಪರಿಸರದ ಬಗ್ಗೆ ಸಂಪೂರ್ಣ ಕಾಳಜಿ ಹೊಂದಿರಬೇಕು ಎಂದು ಫೈಝಲ್ ಹೇಳಿದ್ದಾರೆ.

ಮಾಲ್ಡೀವ್ಸ್‌ ಅನ್ನು ವಿರೋಧಿಸುವ ಭರದಲ್ಲಿ ಎಲ್ಲರೂ ಲಕ್ಷದ್ವೀಪದ ಕಡೆ ಬೊಟ್ಟು ಮಾಡುತ್ತಿದ್ದಾರೆ. ಜನರಿಗೆ ಲಕ್ಷದ್ವೀಪದ ಮೇಲಿನ ಪ್ರೀತಿ ಉಕ್ಕಿ ಬಂದಿದೆ. ಆದರೆ, ಲಕ್ಷದ್ವೀಪಗಳ ಒಟ್ಟು 36 ದ್ವೀಪಗಳಲ್ಲಿ ಕೇವಲ 10 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಪ್ರವಾಸಿಗರು ಬಂದರೂ ಈ ದ್ವೀಪಗಳಿಗೇ ಬರಬೇಕು. ಪ್ರಸ್ತುತ ಲಕ್ಷದ್ವೀಪದ ಜನಸಂಖ್ಯೆಯ ಶೇಕಡಾ 8-10ರಷ್ಟು ಜನರು ಮಾತ್ರ ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಫೈಝಲ್ ತಿಳಿಸಿದ್ದಾರೆ.

ಮಾಲ್ಡೀವ್ಸ್‌ ಸಚಿವರು ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಜಕಾರಣಿಗಳು, ಸೆಲೆಬ್ರೆಟಿಗಳು ಮತ್ತು ಸಾಮಾನ್ಯ ಜನರಿಗೆ ಒಂದೇ ಸಮನೆ ಲಕ್ಷದ್ವೀಪದ ಮೇಲಿನ ಪ್ರೀತಿ ಒಂದೇ ಸಮನೆ ಉಕ್ಕಿ ಬಂದಿದೆ. ಆದರೆ, ಇವರು ಯಾರಿಗೂ ದ್ವೀಪದ ವಸ್ತುಸ್ಥಿತಿ ಗೊತ್ತಿಲ್ಲ. ಪ್ರವಾಸೋಧ್ಯಮ ಅಭಿವೃದ್ದಿ ಎಂದು ಹೇಳುವಾಗ ದ್ವೀಪದ ಜನರು ಭಯಪಡುತ್ತಿದ್ದಾರೆ ಎಂದು ಸಂಸದ ಫೈಝಲ್ ತನ್ನ ಊರಿನ ಕುರಿತು ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ವಾಪಸ್‌ಗೆ ಮಾರ್ಚ್‌ 15ರ ಗಡುವು ನೀಡಿದ ಮಾಲ್ಡೀವ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Lakshadweep is eco sensitive Island. Any mindless development in order to get tourists in to the island may wreck havoc to the otherwise pristine islands. Hope people at power will weigh all pros and cons before taking drastic measures.

  2. This is actual reality check ,to develop Lakshadweep, it requires nearly 10 years,
    Since the infrastructure and connectivity of Lakshadweep with other parts of India is to developed on war footing basis,then only our goal will be reached.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....