Homeಮುಖಪುಟಲಕ್ಷದ್ವೀಪ | ಶಾಲಾ ಪಠ್ಯಕ್ರಮದಿಂದ ಸ್ಥಳೀಯ ಭಾಷೆ 'ಮಹಲ್' ತೆಗೆದುಹಾಕಲು ನಿರ್ಧರಿಸಿದ ಕೇಂದ್ರ ಸರ್ಕಾರ

ಲಕ್ಷದ್ವೀಪ | ಶಾಲಾ ಪಠ್ಯಕ್ರಮದಿಂದ ಸ್ಥಳೀಯ ಭಾಷೆ ‘ಮಹಲ್’ ತೆಗೆದುಹಾಕಲು ನಿರ್ಧರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಲಕ್ಷದ್ವೀಪದ ಶಾಲಾ ಪಠ್ಯಕ್ರಮದಿಂದ ಅರೇಬಿಕ್ ಮತ್ತು ಮಹಲ್ ಭಾಷೆಗಳನ್ನು ತೆಗೆದುಹಾಕಲು ಕೇಂದ್ರಾಡಳಿತ ಪ್ರದೇಶದ ಆಡಳಿತವು ತೆಗೆದುಕೊಂಡ ನಿರ್ಧಾರಕ್ಕೆ ಕೇರಳ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು “ತೀವ್ರವಾಗಿ ತೊಂದರೆದಾಯಕ ವಿಚಾರವಾಗಿದೆ” ಎಂದು ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಲಕ್ಷದ್ವೀಪ | ಶಾಲಾ ಪಠ್ಯಕ್ರಮದಿಂದ

ಮೇ 14 ರಂದು ಕೇಂದ್ರಾಡಳಿತ ಪ್ರದೇಶದ ಶಿಕ್ಷಣ ಇಲಾಖೆಯು 2023 ರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ ಅಡಿಯಲ್ಲಿ ಎರಡು ಭಾಷೆಗಳನ್ನು ತೆಗೆದುಹಾಕುವ ಕುರಿತು ನಿರ್ದೇಶನವನ್ನು ಹೊರಡಿಸಿತು. ಈ ಚೌಕಟ್ಟು 2020 ರ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಭಾಗವಾಗಿದೆ.

ಮಾಲಿಕು ಉಪಭಾಷೆ ಎಂದೂ ಕರೆಯಲ್ಪಡುವ ‘ಮಹಲ್ ಭಾಷೆ’ಯು ಮಾಲ್ಡೀವ್ಸ್‌ನ ಅಧಿಕೃತ ಭಾಷೆಯಾದ ದಿವೇಹಿಯ ರೂಪಾಂತರವಾಗಿದೆ. ಇದು ಹಳೆಯ ಮಾಲ್ಡೀವಿಯನ್ ಅಂಶಗಳನ್ನು ಉಳಿಸಿಕೊಂಡಿದೆ ಆದರೆ ಮಲಯಾಳಂ ಪ್ರಭಾವಗಳನ್ನು ಸಹ ಹೊಂದಿದೆ.

ಲಕ್ಷದ್ವೀಪದ ದ್ವೀಪಸಮೂಹದ ದಕ್ಷಿಣದ ದ್ವೀಪವಾದ ಮಿನಿಕೋಯ್‌ನಲ್ಲಿರುವ ಮಲಯಾಳಂ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳು ಈಗ ಮಲಯಾಳಂ ಮತ್ತು ಇಂಗ್ಲಿಷ್ ಅನ್ನು ಮೊದಲ ಮತ್ತು ಎರಡನೇ ಭಾಷೆಗಳಾಗಿ ನೀಡಲಿವೆ ಎಂದು ಮೇ 14 ರ ನಿರ್ದೇಶನದಲ್ಲಿ ತಿಳಿಸಲಾಗಿದೆ. ಹಿಂದಿ ಬದಲಿಗೆ ಮಹಲ್ ಮತ್ತು ಅರೇಬಿಕ್ ಮೂರನೇ ಭಾಷೆಯಾಗಿ ನೀಡಲಾಗುವುದು ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಶಾಲಾ ಪಠ್ಯಕ್ರಮದಿಂದ ಎರಡು ಭಾಷೆಗಳನ್ನು ತೆಗೆದುಹಾಕುವ ನಿರ್ಧಾರದ ವಿರುದ್ಧ ಲಕ್ಷದ್ವೀಪದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ನೆಪದಲ್ಲಿ” ತೆಗೆದುಕೊಳ್ಳಲಾದ ಭಾಷೆಗಳನ್ನು ತೆಗೆದುಹಾಕುವ ಕ್ರಮವು ಶಿಕ್ಷಣದಲ್ಲಿ ಮಾತೃಭಾಷೆಗಳು ಮತ್ತು ಪ್ರಾದೇಶಿಕ ವೈವಿಧ್ಯತೆಯನ್ನು ಉತ್ತೇಜಿಸುವ ಕೇಂದ್ರ ಸರ್ಕಾರದ ಬದ್ಧತೆಗೆ ವಿರುದ್ಧವಾಗಿದೆ ಎಂದು ಬುಧವಾರ ಶಿವನ್‌ಕುಟ್ಟಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಲಕ್ಷದ್ವೀಪದ ಮಕ್ಕಳಿಗೆ ಅವರ ಭಾಷೆಯನ್ನು ಕಲಿಯುವ ಅವಕಾಶವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಭಾಷಾ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಈ ನಿರ್ಧಾರವು ರಾಷ್ಟ್ರವನ್ನು ವ್ಯಾಖ್ಯಾನಿಸಿದ ಬಹುತ್ವ ಮತ್ತು ಒಳಗೊಳ್ಳುವಿಕೆಯನ್ನು ದುರ್ಬಲಗೊಳಿಸಿದೆ ಎಂದು ಅವರು ಹೇಳಿದ್ದಾರೆ.

“ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಇದು ಗುರುತು, ಇತಿಹಾಸ ಮತ್ತು ಸಂಸ್ಕೃತಿಯ ವಾಹಕವಾಗಿದೆ. ಶಿಕ್ಷಣ ನೀತಿಯ ಮೂಲಕ ಸ್ಥಳೀಯ ಭಾಷೆಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕುವುದು ನಮ್ಮ ಸಮಾಜದ ಸಾಂಸ್ಕೃತಿಕ ರಚನೆಯ ಮೇಲಿನ ದಾಳಿಗಿಂತ ಕಡಿಮೆಯಿಲ್ಲ.” ಎಂದು ಶಿವನ್‌ಕುಟ್ಟಿ ಹೇಳಿರುವುದಾಗಿ ವರದಿಯಾಗಿದೆ.

ಶಿಕ್ಷಣವು ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿ ಒಂದು ವಿಷಯವಾಗಿದೆ ಎಂದು ಅವರು ಹೇಳಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅದರ ಆಡಳಿತದಲ್ಲಿ ಪಾತ್ರವಹಿಸುತ್ತವೆ ಎಂದು ಹೇಳಿದ್ದಾರೆ.

“ಸ್ಥಳೀಯ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ತಳಮಟ್ಟಕ್ಕೆ ತಳ್ಳುವ ಶೈಕ್ಷಣಿಕ ನಿರ್ದೇಶನಗಳನ್ನು ಏಕಪಕ್ಷೀಯವಾಗಿ ಹೇರಲು ಕೇಂದ್ರ ಸರ್ಕಾರವು ಮಾಡುವ ಯಾವುದೇ ಪ್ರಯತ್ನ ಸ್ಪಷ್ಟವಾದ ಅತಿಕ್ರಮಣವಾಗಿದೆ ಮತ್ತು ಅದನ್ನು ವಿರೋಧಿಸಬೇಕು” ಎಂದು ಅವರು ಹೇಳಿದ್ದಾರೆ.

“ಕೇರಳವು ದ್ವೀಪದ ಜನರನ್ನು ಬೆಂಬಲಿಸುತ್ತದೆ” ಎಂದು ಶಿವನ್‌ಕುಟ್ಟಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ. “ಶಿಕ್ಷಣ ವಲಯದಲ್ಲಿನ ಎಲ್ಲಾ ಪ್ರಜಾಪ್ರಭುತ್ವ ಶಕ್ತಿಗಳು, ಶೈಕ್ಷಣಿಕ ಭ್ರಾತೃತ್ವ ಮತ್ತು ಸಂಸ್ಥೆಗಳು ಈ ಭಾಷಾ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಮತ್ತು ನಿರ್ಧಾರವನ್ನು ರದ್ದುಗೊಳಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಬೇಕು.” ಎಂದು ಅವರು ಹ ಏಳಿದ್ದಾರೆ.

ಕೇರಳ ಸರ್ಕಾರವು ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಅಥವಾ ಪಿಎಂ ಶ್ರೀ ಯೋಜನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಸಚಿವರು ಹೇಳಿದ್ದಾರೆ. ಲಕ್ಷದ್ವೀಪ | ಶಾಲಾ ಪಠ್ಯಕ್ರಮದಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...